Wednesday, March 24, 2021

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸರ್ವ ಸದಸ್ಯರ ಸಭೆ

ಭದ್ರಾವತಿ, ಮಾ. ೨೪: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸರ್ವ ಸದಸ್ಯರ ಸಭೆ ಹಳೇನಗರದ ಸಂಘದ ನೂತನ ಕಟ್ಟಡದ ಆವರಣದಲ್ಲಿ ನಡೆಯಿತು.
    ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ ಮಾತನಾಡಿ, ಸಂಘದ ಬಹಳ ವರ್ಷಗಳ ಬೇಡಿಕೆ ಈಡೇರಿದೆ. ನೂತನ ಕಟ್ಟಡ ನಿರ್ಮಾಣಕ್ಕೆ ಸಂಸದರ ನಿಧಿಯಿಂದ ಅನುದಾನ ಬಿಡುಗಡೆಗೊಳಿಸಿರುವ ಬಿ.ವೈ. ರಾಘವೇಂದ್ರ, ಶಾಸಕರ ನಿಧಿಯಿಂದ ಅನುದಾನ ಬಿಡುಗೊಳಿಸಿರುವ ಬಿ.ಕೆ ಸಂಗಮೇಶ್ವರ್ ಹಾಗು ದೇಣಿಗೆ ನೀಡಿರುವ ಸಂಘದ ಸದಸ್ಯರು, ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
   ಸಂಘದ ಖಜಾಂಚಿ ಲೆಕ್ಕಪತ್ರ ಮಂಡಿಸಿ ೫೦ ಲಕ್ಷ ರು. ವೆಚ್ಚದ ನೂತನ ಕಟ್ಟಡ ನಿರ್ಮಾಣಕ್ಕೆ ಇದುವರೆಗೂ ೩೨ ಲಕ್ಷ ರು. ಪಾವತಿಸಲಾಗಿದೆ. ಉಳಿದಂತೆ ಪ್ರಸಕ್ತ ಸಾಲಿನಲ್ಲಿ ಖರ್ಚು, ವೆಚ್ಚಗಳನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ ಎಂದರು.
    ಹಿರಿಯ ಸದಸ್ಯರಾದ ಕೆ. ಶಾಮಣ್ಣ, ಟಿ.ಜಿ ಚಂದ್ರಪ್ಪ, ಪಿಡಬ್ಲ್ಯೂಡಿ ರಂಗಸ್ವಾಮಿ, ಕೆ.ಎಸ್ ಶಿವಮೂರ್ತಿ, ಸಿ. ಪರಮೇಶ್ವರಪ್ಪ, ಎಚ್.ಎನ್ ಮಹಾರುದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment