Wednesday, March 17, 2021

ಎನ್. ಅಶೋಕ್‌ಕುಮಾರ್‌ಗೆ ಬೆಳ್ಳಿ ಪದಕ

ಬೆಂಗಳೂರಿನಲ್ಲಿ ೨ ದಿನಗಳ ಕಾಲ ಆಯೋಜಿಸಲಾಗಿದ್ದ ೨ನೇ ಕರ್ನಾಟಕ ಸ್ಟೇಟ್ ಮಾಸ್ಟರ್‍ಸ್ ಗೇಮ್ಸ್ ಪಂದ್ಯಾವಳಿಯಲ್ಲಿ ಭದ್ರಾವತಿ ಸಿದ್ದರೂಢನಗರದ ನಿವಾಸಿ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ತರೀಕೆರೆ ಶಾಖೆ ವ್ಯವಸ್ಥಾಪಕ ಎನ್. ಅಶೋಕ್‌ಕುಮಾರ್ ದ್ವಿತೀಯ ಬಹುಮಾನದೊಂದಿಗೆ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
   ಭದ್ರಾವತಿ, ಮಾ. ೧೭: ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ಬೆಂಗಳೂರಿನಲ್ಲಿ ೨ ದಿನಗಳ ಕಾಲ ಆಯೋಜಿಸಲಾಗಿದ್ದ ೨ನೇ ಕರ್ನಾಟಕ ಸ್ಟೇಟ್ ಮಾಸ್ಟರ್‍ಸ್ ಗೇಮ್ಸ್ ಪಂದ್ಯಾವಳಿಯಲ್ಲಿ ಸಿದ್ದರೂಢನಗರದ ನಿವಾಸಿ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ತರೀಕೆರೆ ಶಾಖೆ ವ್ಯವಸ್ಥಾಪಕ ಎನ್. ಅಶೋಕ್‌ಕುಮಾರ್ ದ್ವಿತೀಯ ಬಹುಮಾನದೊಂದಿಗೆ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ೫೫ ವರ್ಷ ಮೇಲ್ಪಟ್ಟ ಪುರುಷರ ವಿಭಾಗದ ೫ ಸಾವಿರ ಮೀಟರ್ ನಡಿಗೆಯಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದು, ಅಶೋಕ್‌ಕುಮಾರ್ ಮೊದಲ ಬಾರಿಗೆ ಪಂದ್ಯಾವಳಿಯಲ್ಲಿ ಭಾಗವಹಿಸಿ ಮೊದಲ ಸ್ಪರ್ಧೆಯಲ್ಲಿಯೇ ಬಹುಮಾನ ಪಡೆದುಕೊಂಡಿರುವುದು ವಿಶೇಷವಾಗಿದೆ.
ಕ್ರೀಡೆಯಲ್ಲಿ ಆಸಕ್ತಿ ಹೊಂದಿ ಸುಮಾರು ೧ ವರ್ಷದಿಂದ ನಿರಂತರವಾಗಿ ಅಭ್ಯಾಸ ನಡೆಸಿ ಇದೀಗ ಯಶಸ್ವಿಯಾಗಿದ್ದಾರೆ. ಇವರ ಸಾಧನೆಗೆ ನಗರದ ಗಣ್ಯರು ಅಭಿನಂದಿಸಿದ್ದಾರೆ.  

No comments:

Post a Comment