Saturday, March 20, 2021

ಕೋಡಿಹಳ್ಳಿಯಲ್ಲಿ ತಹಸೀಲ್ದಾರ್ ಗ್ರಾಮ ವಾಸ್ತವ್ಯ

ಭದ್ರಾವತಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ನೇತೃತ್ವದ ತಂಡ ಶನಿವಾರ ತಾಲೂಕಿನ ಕೂಡ್ಲಿಗೆರೆ ಹೋಬಳಿ ಕೋಡಿಹಳ್ಳಿ ಗ್ರಾಮದಲ್ಲಿ ವಾಸ್ತವ್ಯ ನಡೆಸಿತು.
    ಭದ್ರಾವತಿ, ಮಾ. ೨೦: ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ನೇತೃತ್ವದ ತಂಡ ಶನಿವಾರ ತಾಲೂಕಿನ ಕೂಡ್ಲಿಗೆರೆ ಹೋಬಳಿ ಕೋಡಿಹಳ್ಳಿ ಗ್ರಾಮದಲ್ಲಿ ವಾಸ್ತವ್ಯ ನಡೆಸಿತು.
     ಗ್ರಾಮದ ಸರ್ವೆ ನಂ.೨೮ರಲ್ಲಿ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ, ಕೊಟ್ಟದಾಳು ಸರ್ವೆ ನಂ. ೧ ಮತ್ತು ೨ರಲ್ಲಿ ಬಗರ್‌ಹುಕುಂ ಸಾಗುವಳಿ ವಿಚಾರಕ್ಕೆ ಸಂಬಂಧಿಸಿದಂತೆ, ಕೂಡ್ಲಿಗೆರೆ ಗ್ರಾಮದ ಸ್ಮಶಾನ ಹಾಗು ಗುಂಡುತೋಪು ಜಾಗ ಹಾಗು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಜೂರಾತಿಯಾಗಿರುವ ಜಾಗ ಪರಿಶೀಲನೆ, ಕೋಡಿಹಳ್ಳಿ ಗ್ರಾಮದ ಬಳಸೋಕೆರೆ ಹೂಳು ತೆಗೆಯುವ ಸಂಬಂಧ ಪಿಡಿಓ ಜೊತೆ ಚರ್ಚೆ, ಗ್ರಾಮದ ಪರಿಶಿಷ್ಟ ಜಾತಿ/ಪಂಗಡ ಕಾಲೋನಿಯಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳ  ಕುರಿತು ಪಿಡಿಓ ಮತ್ತು ಕಂದಾಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲಕ್ ಬಿ ವೀರಪ್ಪ, ಸದಸ್ಯರಾದ ಜಿ.ಆರ್ ನಾಗರಾಜ್, ಕೂಡ್ಲಿಗೆರೆ ರುದ್ರೇಶ್, ಉಪತಹಸೀಲ್ದಾರ್‌ಗಳಾದ ನಾರಾಯಣಗೌಡ, ಮಂಜಾನಾಯ್ಕ, ಆರ್.ಆರ್ ಶಿರಸ್ತೆದಾರ್ ಮಲ್ಲಿಕಾರ್ಜುನಯ್ಯ, ರಾಜ್ಯಸ್ವ ನಿರೀಕ್ಷಕ ಪ್ರಶಾಂತ್, ಜಗದೀಶ್ ಹಾಗು ಎಲ್ಲಾ ಗ್ರಾಮ ಪಂಚಾಯಿತಿಗಳ ಪಿಡಿಓಗಳು, ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.  

No comments:

Post a Comment