Saturday, March 27, 2021

ಉತ್ತಮ ವ್ಯಾಯಾಮ, ದೈಹಿಕ ಶ್ರಮಗಳಿಂದ ಮೂಳೆ ಸವೆತಕ್ಕೆ ಕಡಿವಾಣ : ಡಾ. ವೀಣಾ ಎಸ್ ಭಟ್

ಹಳೇನಗರ ಮಹಿಳಾ ಸೇವಾ ಸಮಾಜ, ತಾಲೂಕು ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಹುಬ್ಬಳ್ಳಿಯ ಮೇಯರ್ ಆರ್ಗ್ಯಾನಿಕ್ ಪ್ರೈವೇಟ್ ಲಿ., ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ಮೂಳೆ ಸಾಂದ್ರತೆ ಚಿಕಿತ್ಸೆ ಹಾಗು ತಪಾಸಣಾ ಶಿಬಿರ ಡಾ. ವೀಣಾ ಎಸ್ ಭಟ್, ಹೇಮಾವತಿ ವಿಶ್ವನಾಥ್, ಅನ್ನಪೂರ್ಣ ಸತೀಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ: ಮಹಿಳೆಯರು ಉತ್ತಮ ವ್ಯಾಯಾಮ ಹಾಗು ದೈಹಿಕ ಶ್ರಮಗಳಿಂದ ೪೦ ವರ್ಷಗಳ ನಂತರ ಕಾಣಿಸಿಕೊಳ್ಳುವ ಮೂಳೆ ಸವೆತ ಹಾಗು ಇನ್ನಿತರ ಸಮಸ್ಯೆಗಳಿಂದ ಪಾರಾಗಲು ಸಾಧ್ಯ ಎಂದು ನಗರದ ಸ್ತ್ರೀ ರೋಗ ತಜ್ಞೆ ಡಾ. ವೀಣಾ ಎಸ್ ಭಟ್ ತಿಳಿಸಿದರು.
    ಅವರು ಹಳೇನಗರ ಮಹಿಳಾ ಸೇವಾ ಸಮಾಜ, ತಾಲೂಕು ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಹುಬ್ಬಳ್ಳಿಯ ಮೇಯರ್ ಆರ್ಗ್ಯಾನಿಕ್ ಪ್ರೈವೇಟ್ ಲಿ., ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ಮೂಳೆ ಸಾಂದ್ರತೆ ಚಿಕಿತ್ಸೆ ಹಾಗು ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಋತು ಚಕ್ರ ಆರಂಭದಿಂದ ನಿಲ್ಲುವವರೆಗೂ ಮಹಿಳೆಯರು ಹಲವಾರು ಹಂತಗಳನ್ನು ದಾಟಿ ಜೀವನ ನಡೆಸಬೇಕಿದೆ. ಈ ಹಿನ್ನಲೆಯಲ್ಲಿ ಉತ್ತಮ ಆರೋಗ್ಯ ಹೊಂದುವುದು ಅವಶ್ಯಕ.
    ೩೦ ವರ್ಷಗಳವರೆಗೆ ಮಹಿಳೆಯರು ನಿರಂತರವಾಗಿ ಮೂಳೆ ಸಾಂದ್ರತೆ ಪರೀಕ್ಷೆ ಮಾಡಿಸಿಕೊಳ್ಳುವ ಜೊತೆಗೆ ಭವಿಷ್ಯದಲ್ಲಿ ಎದುರಾಗುವ ಮೂಳೆ ಸವೆತದಿಂದ ಪಾರಾಗಲು ಅಗತ್ಯವಿರುವ ಕ್ರಮಗಳನ್ನು ರೂಢಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
    ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್, ಒಕ್ಕಲಿಗರ ಮಹಿಳಾ ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್ ಅಧ್ಯಕ್ಷತೆ ವಹಿಸಿದ್ದರು.
   ಪ್ರಮುಖರಾದ ಶೋಭಾ ಗಂಗರಾಜ್, ಜಯಂತಿ ಶೇಟ್, ಶಕುಂತಲ, ಲೋಹಿತಾ ನಂಜಪ್ಪ, ವಿಶ್ವೇಶ್ವರಯ್ಯ, ಪ್ರಜ್ವಲ್, ಉಮೇಶ್, ಶಾರದ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

No comments:

Post a Comment