ಭದ್ರಾವತಿ ಹಳೇನಗರದ ಕುಂಬಾರರ ಬೀದಿಯಲ್ಲಿ ಹೋಳಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿಸ ಲಾಗಿರುವ ರತಿ, ಮನ್ಮಥ.
ಭದ್ರಾವತಿ, ಮಾ. ೨೭: ರತಿ, ಮನ್ಮಥ ಪ್ರತಿಷ್ಠಾಪನೆಯೊಂದಿಗೆ ಹಳೇನಗರದ ವಿವಿಧೆಡೆ ಕಳೆದ ೩ ದಿನಗಳಿಂದ ಹೋಳಿ ಹಬ್ಬ ಆಚರಣೆಗೆ ಚಾಲನೆ ನೀಡಲಾಗಿದೆ.
ಕೋವಿಡ್-೧೯ರ ನಡುವೆಯೂ ಪ್ರತಿವರ್ಷದಂತೆ ಈ ಬಾರಿ ಸಹ ಹಳೇನಗರದ ಕುಂಬಾರರ ಬೀದಿಯಲ್ಲಿ ಹೋಳಿ ಮಹೋತ್ಸವ ಸೇವಾ ಸಮಿತಿ ವತಿಯಿಂದ ಮತ್ತು ಪೇಟೆ ಬೀದಿಯಲ್ಲಿ ರತಿ, ಮನ್ಮಥ ಇಬ್ಬರನ್ನು ಪ್ರತಿಷ್ಠಾಪಿಸಲಾಗಿದೆ. ಆದರೆ ಬ್ರಾಹ್ಮಣರ ಬೀದಿಯಲ್ಲಿ ಶ್ರೀ ಮನ್ಮಥ ಸೇವಾ ಸಮಿತಿ ವತಿಯಿಂದ ಕೇವಲ ಮನ್ಮಥ ಮಾತ್ರ ಪ್ರತಿಷ್ಠಾಪಿಸಲಾಗಿದೆ.
ಸಾಂಸ್ಕೃತಿಕ ಹಾಗು ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗುತ್ತಿದ್ದು, ಮಾ.೨೯ರ ಸೋಮವಾರ ಬೆಳಿಗ್ಗೆ ರತಿ ಮನ್ಮಥ ರಾಜಬೀದಿ ಉತ್ಸವ ಮೆರವಣಿಗೆಗಳೊಂದಿಗೆ ಕಾಮದಹನ ನಡೆಯಲಿದೆ.
ಈಗಾಗಲೇ ಸರ್ಕಾರ ಕೋವಿಡ್-೧೯ರ ಹಿನ್ನಲೆಯಲ್ಲಿ ಹೋಳಿ ಹಬ್ಬ ಆಚರಣೆಗೆ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ್ದು, ಹೆಚ್ಚಿನ ಜನಸಂದಣಿ ಉಂಟಾಗದಂತೆ ಎಚ್ಚರವಹಿಸುವಂತೆ ಸೂಚಿಸಿದೆ.
ಭದ್ರಾವತಿ ಹಳೇನಗರದ ಬ್ರಾಹ್ಮಣರ ಬೀದಿಯಲ್ಲಿ ಹೋಳಿ ಹಬ್ಬದ ಪ್ರಮುಕ್ತ ಪ್ರತಿಷ್ಠಾಪಿಸಲಾಗಿರುವ ಮನ್ಮಥ.
No comments:
Post a Comment