ಭದ್ರಾವತಿ ನಗರಸಭೆ ವ್ಯಾಪ್ತಿಯ ಉಜ್ಜನಿಪುರ ಶ್ರೀ ಮದ್ದೂರಮ್ಮ ದೇವಿ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಅದ್ದೂರಿಯಾಗಿ ಜರುಗಿತು. ಅಮ್ಮನವರಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ ನೆರವೇರಿಸಲಾಯಿತು.
ಭದ್ರಾವತಿ, ಮಾ. ೨೪: ನಗರಸಭೆ ವ್ಯಾಪ್ತಿಯ ಉಜ್ಜನಿಪುರ ಶ್ರೀ ಮದ್ದೂರಮ್ಮ ದೇವಿ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಅದ್ದೂರಿಯಾಗಿ ಜರುಗಿತು.
ಬುಧವಾರ ಮಧ್ಯಾಹ್ನ ಅಮ್ಮನವರಿಗೆ ವಿಶೇಷ ಪೂಜೆ, ಮಹಾಮಂಗಳಾರತಿ, ತಂಬಿಟ್ಟಿನ ಆರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ದೇವಸ್ಥಾನ ಸೇವಾ ಸಮಿತಿ ವತಿಯಿಂದ ಭಕ್ತಾಧಿಗಳಿಗೆ ತಂಪು ಪಾನೀಯ ವಿತರಣೆ, ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.
No comments:
Post a Comment