Wednesday, March 17, 2021

ರಕ್ತದಾನ ಮಹಾ ಕಾರ್ಯ, ಯಾವುದೇ ದುಷ್ಪರಿಣಾಮವಿಲ್ಲ : ಬಿ.ಕೆ ಮೋಹನ್

ಭದ್ರಾವತಿ ಜನ್ನಾಪುರ ಎನ್‌ಟಿಬಿ ಕಛೇರಿ ಆವರಣದಲ್ಲಿರುವ ನಗರ ಆರೋಗ್ಯ ಕೇಂದ್ರದ ವತಿಯಿಂದ ಬುಧವಾರ ರಕ್ತದಾನ ಶಿಬಿರ ಹಾಗು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
   ಭದ್ರಾವತಿ, ಮಾ. ೧೭: ರಕ್ತದಾನ ಮಹಾ ಕಾರ್ಯವಾಗಿದ್ದು, ರಕ್ತದಾನ ಮಾಡುವುದರಿಂದ ಯಾರಿಗೂ ಯಾವುದೇ ರೀತಿ ತೊಂದರೆಯಾಗುವುದಿಲ್ಲ ಎಂದು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಹೇಳಿದರು.
  ಅವರು ಬುಧವಾರ ಜನ್ನಾಪುರ ಎನ್‌ಟಿಬಿ ಕಛೇರಿ ಆವರಣದಲ್ಲಿರುವ ನಗರ ಆರೋಗ್ಯ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರ ಹಾಗು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು.
   ತಾವು ಸಹ ಯಾವುದೇ ಪ್ರಚಾರವಿಲ್ಲದೆ ರಕ್ತದಾನದಲ್ಲಿ ತೊಡಗಿಸಿಕೊಂಡಿದ್ದು, ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಆರೋಗ್ಯ ಸುಧಾರಣೆ ಜೊತೆಗೆ ಮತ್ತೊಬ್ಬರ ಜೀವ ಉಳಿಸಬಹುದಾಗಿದೆ. ಇಂತಹ ಕಾರ್ಯದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವುದು ಬಹಳ ಮುಖ್ಯವಾಗಿದೆ ಎಂದರು.
ಆರೋಗ್ಯ ಕೇಂದ್ರದ ವೈದ್ಯೆ ಡಾ. ಕವಿತಾ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸದಸ್ಯ ಅನಿಲ್‌ಕುಮಾರ್, ಮೂಳೆರೋಗ ತಜ್ಞ  ಡಾ. ಸುರೇಶ್, ಸರ್ಜನ್ ಡಾ. ರಾಜು, ದಂತ ತಜ್ಞ ಡಾ. ಸುರೇಶ್, ಚರ್ಮರೋಗ ತಜ್ಞ ಡಾ. ಭರತ್‌ಕುಮಾರ್, ಸ್ತ್ರೀರೋಗ ತಜ್ಞೆ ಡಾ. ಸ್ಮೃತಿ, ಮಕ್ಕಳ ತಜ್ಞ ಡಾ. ಅಜಯ್, ರಕ್ತನಿಧಿ ಕೇಂದ್ರದ ಡಾ. ಅಶೋಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
   ಆರೋಗ್ಯ ಕೇಂದ್ರದ ದೇವರಾಜ್, ಕಿರಣ್, ಸಚಿನ್, ಕೋಮಲಕುಮಾರಿ, ಸೆಲ್ವಿ, ಮಂಗಳ, ಶಿಲ್ಪ, ಉಷಾ ಮತ್ತು ಚೇತನ್ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

No comments:

Post a Comment