Tuesday, March 30, 2021

ಮಹಿಳೆಯರು ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಿ : ಡಾ. ರಕ್ಷಾ ಯು. ರಾವ್

ಭದ್ರಾವತಿ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ . ಸಮಾಜದ ಹಿರಿಯ ಸದಸ್ಯರಾದ ವಸುಧಾ ಮುಕುಂದ್, ರಾಧ ಕೆ. ಭಟ್, ಪುಷ್ಪ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
  ಭದ್ರಾವತಿ, ಮಾ. ೩೦: ಮಹಿಳೆಯರು ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕೆಂದು ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ತಜ್ಞೆ ಡಾ. ರಕ್ಷಾ ಯು. ರಾವ್ ತಿಳಿಸಿದರು.
    ಅವರು ಮಂಗಳವಾರ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
   ಮಹಿಳೆಯರಲ್ಲಿ ಗರ್ಭಕೋಶದ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇದರಿಂದಾಗಿ ಆರೋಗ್ಯದ ಮೇಲೆ ಹಲವು ರೀತಿಯ ದುಷ್ಪರಿಣಾಮಗಳು ಉಂಟಾಗುತ್ತಿವೆ. ಈ ಹಿನ್ನಲೆಯಲ್ಲಿ ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚಿನ ತಿಳುವಳಿಕೆ ಹೊಂದುವ ಜೊತೆಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಅಗತ್ಯ ಎಂದರು.
   ಕಾರ್ಯಕ್ರಮವನ್ನು ನಗರಸಭೆ ಪೌರಾಯುಕ್ತ ಮನೋಹರ್ ಉದ್ಘಾಟಿಸಿದರು. ಸಮಾಜದ ಹಿರಿಯ ಸದಸ್ಯರಾದ ವಸುಧಾ ಮುಕುಂದ್, ರಾಧ ಕೆ. ಭಟ್, ಪುಷ್ಪ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
   ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶೋಭ ಗಂಗರಾಜ್, ಖಜಾಂಚಿ ಜಯಂತಿ ಶೇಟ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಕಮಲಕುಮಾರಿ, ಡಾ. ವೀಣಾ ಎಸ್ ಭಟ್, ಅನ್ನಪೂರ್ಣಸತೀಶ್, ಇಂದಿರಾ ರಮೇಶ್, ರೂಪರಾವ್, ಯಶೋಧ ವೀರಭದ್ರಪ್ಪ, ಚಂದ್ರಕಲಾ ವರದರಾಜ್, ಶಕುಂತಲ ರವಿಕುಮಾರ್, ಭಾಗ್ಯ ನಿಜಗುಣ, ಶಾರದ ಶ್ರೀನಿವಾಸ್, ಕಮಲರಾಯ್ಕರ್ ಸೇರಿದಂತೆ ಬಹುತೇಕ ಸದಸ್ಯರು ಪಾಲ್ಗೊಂಡಿದ್ದರು.

ಚಿತ್ರ: ಡಿ೩೦-ಬಿಡಿವಿಟಿ೨



No comments:

Post a Comment