Saturday, March 13, 2021

ಡಾ. ನರಸಿಂಹಭಟ್ ನಿಧನ

ಡಾ. ನರಸಿಂಹಭಟ್
ಭದ್ರಾವತಿ, ಮಾ. ೧೩: ತಾಲೂಕಿನ ಬಾರಂದೂರು ಗ್ರಾಮದ ನಿವಾಸಿ, ವೈದ್ಯ ಡಾ. ನರಸಿಂಹಭಟ್ ನಿಧನ ಹೊಂದಿದರು.
    ಓರ್ವ ಪುತ್ರ, ಇಬ್ಬರು ಪುತ್ರಿ, ಸೊಸೆ, ಅಳಿಯಂದಿರು ಹಾಗು ಮೊಮ್ಮಕ್ಕಳನ್ನು ಬಿಟ್ಟಗಲಿದ್ದಾರೆ. ಡಾ. ನರಸಿಂಹಭಟ್ ಬಾರಂದೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರಪರಿಚಿತರಾಗಿದ್ದು, ವೈದ್ಯ ವೃತ್ತಿಯಲ್ಲಿ ವಿಶಿಷ್ಟತೆ ಕಾಯ್ದುಕೊಳ್ಳುವ ಜೊತೆಗೆ ಬಡವರಿಗೆ ಉಚಿತ ಸೇವೆ ಸಲ್ಲಿಸುತ್ತಿದ್ದರು. ಇವರ ನಿಧನಕ್ಕೆ ಬಾರಂದೂರು ಗ್ರಾಮಸ್ಥರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.


No comments:

Post a Comment