Monday, March 29, 2021

ಅದ್ದೂರಿಯಾಗಿ ಜರುಗಿದ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ

ಭದ್ರಾವತಿ ತಾಲೂಕಿನ ಪುರಾಣ ಪ್ರಸಿದ್ದ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಸೋಮವಾರ ಅದ್ದೂರಿಯಾಗಿ ಜರುಗಿತು.

   ಭದ್ರಾವತಿ, ಮಾ. ೨೯: ತಾಲೂಕಿನ ಪುರಾಣ ಪ್ರಸಿದ್ದ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಸೋಮವಾರ ಅದ್ದೂರಿಯಾಗಿ ಜರುಗಿತು.
   ಪ್ರತಿವರ್ಷದಂತೆ ಈ ಬಾರಿ ಸಹ ವೈಭವಯುತವಾಗಿ ಸ್ವಾಮಿಯ ರಥೋತ್ಸವ ಆರಂಭಗೊಂಡಿದ್ದು, ಭಕ್ತಾಧಿಗಳು ಸ್ವಾಮಿಗೆ ಜೈಕಾರ ಹಾಕುವ ಮೂಲಕ ಸಂಭ್ರಮಿಸಿದರು. ಭಜನಾ ತಂಡಗಳಿಂದ ಭಜನೆ ನಡೆಯಿತು.
   ಮಧ್ಯಾಹ್ನ ಸುಮಾರು ೧೨ ಗಂಟೆಗೆ ದೇವಸ್ಥಾನ ಆವರಣದಿಂದ ಆರಂಭಗೊಂಡ ರಥೋತ್ಸವ ಅಗಸೆ ಬಾಗಿಲಿನವರೆಗೂ ಸಾಗಿತು. ಭಕ್ತಾಧಿಗಳಿಗೆ ಪಾನಕ, ಮಜ್ಜಿಗೆ ವಿತರಿಸಲಾಯಿತು.
ದೇವಸ್ಥಾನದಲ್ಲಿ ಮೂಲ ವಿಗ್ರಹಕ್ಕೆ ವಿಶೇಷ ಪೂಜೆ, ಅಲಂಕಾರ ಕೈಗೊಳ್ಳಲಾಗಿತ್ತು. ಕೋವಿಡ್-೧೯ ಭೀತಿ ನಡುವೆಯೂ ನಗರ ಹಾಗು ಗ್ರಾಮಾಂತರ ಭಾಗಗಳಿಂದ ಭಕ್ತಾಧಿಗಳು ಆಗಮಿಸಿದ್ದರು.

No comments:

Post a Comment