ಗುರುವಾರ, ಮಾರ್ಚ್ 11, 2021

ನಿವೃತ್ತ ಶಿಕ್ಷಕ ಮರಿಯಪ್ಪ ನಿಧನ

ಮರಿಯಪ್ಪ
   ಭದ್ರಾವತಿ, ಮಾ. ೧೧: ತಾಲೂಕಿನ ಹಿರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಬಿ.ಎಂ.ಎಂ.ಆರ್ ಪ್ರೌಢಶಾಲೆಯ ಸಂಸ್ಥಾಪಕ, ನಿವೃತ್ತ ಶಿಕ್ಷಕ ಮರಿಯಪ್ಪ ಗುರುವಾರ ನಿಧನ ಹೊಂದಿದರು.
   ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗು ಸೊಸೆ, ಮೊಮ್ಮಕ್ಕಳನ್ನು ಹೊಂದಿದ್ದರು. ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.
ಮರಿಯಪ್ಪ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ನಂತರ ಹಿರಿಯೂರು ಮತ್ತು ಉಜ್ಜನಿಪುರದಲ್ಲಿ ಎರಡು ವಿದ್ಯಾಸಂಸ್ಥೆಗಳನ್ನು ಆರಂಭಿಸುವಲ್ಲಿ ಯಶಸ್ವಿಯಾಗಿದ್ದರು.
   ಇವರ ನಿಧನಕ್ಕೆ ನಗರದ ಗಣ್ಯರು, ಹಿರಿಯೂರು ಗ್ರಾಮಸ್ಥರು, ವಿದ್ಯಾಸಂಸ್ಥೆ ಆಡಳಿತ ಮಂಡಳಿಯವರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.


1 ಕಾಮೆಂಟ್‌: