Sunday, March 21, 2021

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಗ್ರಾಮೀಣ ಆಟದೊಂದಿಗೆ ಸಂಭ್ರಮ

ನೆಹರು ಯುವ ಕೇಂದ್ರ, ಸಮೃದ್ಧಿ ಯುವತಿ ಮಂಡಳಿ, ಅರಿವು ಮಹಿಳಾ ಸಂಘ ಹಾಗು ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ಅಂಬೇಡ್ಕರ್ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಗ್ರಾಮೀಣ ಆಟ ಜರುಗಿತು.

ಭದ್ರಾವತಿ, ಮಾ. ೨೧: ನೆಹರು ಯುವ ಕೇಂದ್ರ, ಸಮೃದ್ಧಿ ಯುವತಿ ಮಂಡಳಿ, ಅರಿವು ಮಹಿಳಾ ಸಂಘ ಹಾಗು ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ಅಂಬೇಡ್ಕರ್ ಸಮುದಾಯ ಭವನದಲ್ಲಿ ಭಾನುವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.
    ಮಹಿಳೆಯರಿಗಾಗಿ ಗ್ರಾಮೀಣ ಆಟಗಳ ಸ್ಪರ್ಧೆ ಜರುಗಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸಮೃದ್ಧಿ ಯುವತಿ ಮಂಡಳಿ ಅಧ್ಯಕ್ಷೆ ಶಿಲ್ಪ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.
    ಎಂಪಿಎಂಇಎಸ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸಿಎಸ್ ಜಮುನ ಕಾರ್ಯಕ್ರಮ ಉದ್ಘಾಟಿಸಿದರು. ಆಶಾ ಮೇಲ್ವಿಚಾರಕಿ ಬಿ.ಎಂ ವಸಂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿಶೇಷವಾಗಿ ಪೌರಕಾರ್ಮಿಕರಾದ ನಂಜಮ್ಮ ಹಾಗು ಸೋಬಾನಪದ ಆಕಾಶವಾಣಿ ಕಲಾವಿದೆ ಗಿರಿಜಮ್ಮ ತಿಮ್ಮಪ್ಪರವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ತಮಟೆ ಜಗದೀಶ್, ಜಿ. ದಿವಾಕರ್, ಜಿ. ರವಿಕುಮಾರ್, ಸೋಮಶೇಖರ್, ಸಹನಾ, ವೀರೇಶ್, ಶಾರದಮ್ಮ, ಟಿ. ರಘುನಾಯ್ಕ್, ಕೆ. ಮಂಜು ಮತ್ತು ಲತಾ ಪ್ರಸಾದ್ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದರು.


No comments:

Post a Comment