Thursday, March 18, 2021

ಪೌರಾಯುಕ್ತ ಮನೋಹರ್ ನೇತೃತ್ವದಲ್ಲಿ ಚಿಕ್ಕಯ್ಯನ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಸರ್ವೆ ನಂ.೭೨ರ ಬುಳ್ಳಾಪುರ ಸರ್ಕಾರಿ ಚಿಕ್ಕಯ್ಯನ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಪೌರಾಯುಕ್ತ ಮನೋಹರ್ ನೇತೃತ್ವದಲ್ಲಿ ನಡೆಯಿತು.
    ಭದ್ರಾವತಿ, ಮಾ. ೧೮: ನಗರಸಭೆ ವ್ಯಾಪ್ತಿಯ ಸರ್ವೆ ನಂ.೭೨ರ ಬುಳ್ಳಾಪುರ ಸರ್ಕಾರಿ ಚಿಕ್ಕಯ್ಯನ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಪೌರಾಯುಕ್ತ ಮನೋಹರ್ ನೇತೃತ್ವದಲ್ಲಿ ನಡೆಯಿತು.
     ೫ ಎಕರೆ ೨೭ ಗುಂಟೆ ವಿಸ್ತೀರ್ಣವುಳ್ಳ ಚಿಕ್ಕಯ್ಯನ ಕೆರೆ ಒತ್ತುವರಿ ತೆರವು ಕಾರ್ಯಾಚರಣೆಗೆ ಈ ಹಿಂದೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಪೌರಾಯುಕ್ತ ಮನೋಹರ್ ಸ್ಥಳೀಯರು ಹಾಗು ರೈತರೊಂದಿಗೆ ಮಾತುಕತೆ ನಡೆಸಿ ಯಶಸ್ವಿಯಾಗಿದ್ದು, ಈ ಹಿನ್ನಲೆಯಲ್ಲಿ ಇದೀಗ ಪುನಃ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.
     ಬೇಸಿಗೆಯಲ್ಲಿ ರೈತರಿಗೆ, ಜಾನುವಾರುಗಳಿಗೆ ಅನುಕೂಲ ಕಲ್ಪಿಸಿಕೊಡುವ ಜೊತೆಗೆ ಅಂತರ್ಜಲ ಮಟ್ಟ ಹೆಚ್ಚಿಸಲು ನಗರಸಭೆ ವ್ಯಾಪ್ತಿಯಲ್ಲಿನ ಕೆರೆಗಳನ್ನು ಅಭಿವೃದ್ಧಿಗೊಳಿಸುವಂತೆ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಹಲವಾರು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿದ್ದು, ಈ ಸಂಬಂಧ ನಗರಸಭೆಗೆ ಹಲವಾರು ಬಾರಿ ಮನವಿ ಪತ್ರ ಸಹ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಕಳೆದ ಸುಮಾರು ೨ ವರ್ಷಗಳಿಂದ ನಿರಂತರವಾಗಿ ಪೌರಾಯುಕ್ತ ಮನೋಹರ್ ನಗರಸಭೆ ವ್ಯಾಪ್ತಿಯಲ್ಲಿ ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಆಸಕ್ತಿ ವಹಿಸಿ ತಾಲೂಕು ಆಡಳಿತದ ನೆರವಿನೊಂದಿಗೆ ಬೌಂಡರಿ ನಿಗದಿಪಡಿಸುವ ಮೂಲಕ ತೆರವು ಕಾರ್ಯಾಚರಣೆಗೆ ಮುಂದಾಗಿದ್ದಾರೆ.
   ತೆರವು ಕಾರ್ಯಾಚರಣೆ ವೇಳೆ ಸ್ಥಳೀಯರಾದ ಮುರುಗನ್, ಪ್ರಸನ್ನ, ಯೋಗೇಶ್, ಜಾನಿ, ಸಿಂಗ್, ನಾರಾಯಣಪ್ಪ, ಉಮೇಶ್, ದಶರಥ, ಸುಬ್ಬು ಹಾಗು ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಮತ್ತು ಕಾಗದನಗರ ಪೊಲೀಸ್ ಠಾಣೆ ಸಿಬ್ಬಂದಿಗಳಾದ ರಾಜೇಶ್, ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment