ಭದ್ರಾವತಿ, ಮಾ. ೨: ಈ ಬಾರಿ ನಗರಸಭೆ ಆಯ-ವ್ಯಯ ಮಂಡನೆ ಮಾ.೩ರ ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಸಭಾಂಗಣದಲ್ಲಿ ನಡೆಯಲಿದೆ.
ನಗರಸಭೆ ಆಡಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದು, ಪೌರಾಯುಕ್ತ ಮನೋಹರ್ ಉಪಸ್ಥಿತರಿರುವರು. ಈಗಾಗಲೇ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ರಾಜಕೀಯ ಮುಖಂಡರು ಸೇರಿದಂತೆ ಇನ್ನಿತರರು ಹಲವಾರು ಸಲಹೆ-ಸೂಚನೆಗಳನ್ನು ನೀಡಿದ್ದಾರೆ. ನಗರಸಭೆ ಆದಾಯ ಕ್ರೋಢೀಕರಣದ ಜೊತೆಗೆ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕುರಿತು ಭರವಸೆ ನೀಡಿತ್ತು. ಈ ಹಿನ್ನಲೆಯಲ್ಲಿ ಈ ಬಾರಿ ಬಜೆಟ್ನಲ್ಲಿ ನಗರದ ನಾಗರೀಕರು ಹಲವಾರು ನಿರೀಕ್ಷೆಗಳನ್ನು ಎದುರು ನೋಡುತ್ತಿದ್ದಾರೆ.
No comments:
Post a Comment