ಭದ್ರಾವತಿ ಆಕಾಶವಾಣಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಲತೀಶ್ ಪಾಲ್ದಾನೆ ಮಂಗಳೂರು ಆಕಾಶವಾಣಿ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದು, ಈ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಬೀಳ್ಕೊಡುಗೆ ನೀಡಲಾಯಿತು.
ಭದ್ರಾವತಿ, ಮಾ. ೨೩: ನಗರದ ಭದ್ರಾವತಿ ಆಕಾಶವಾಣಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಲತೀಶ್ ಪಾಲ್ದಾನೆ ಮಂಗಳೂರು ಆಕಾಶವಾಣಿ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದಾರೆ.
ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಜೊತೆಗೆ ಎಲ್ಲರೊಂದಿಗೂ ಒಡನಾಟಹೊಂದಿದ್ದ ಲತೀಶ್ ಪಾಲ್ದಾನೆರವರ ಕರ್ತವ್ಯ ಸ್ಮರಿಸುವ ಜೊತೆಗೆ ವಿಶೇಷವಾಗಿ ಆಕಾಶವಾಣಿ ಕೇಂದ್ರದ ಸಾಂದರ್ಭಿಕ ಉದ್ಘೋಷಕರು ಅಭಿನಂದಿಸುವ ಮೂಲಕ ಬೀಳ್ಕೊಡುಗೆ ನೀಡಿದರು.
ಕರ್ನಾಟಕ ರಾಜ್ಯ ಸಾಂದರ್ಭಿಕ ಉದ್ಘೋಷಕರ ಸಂಘದ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ ಶರ್ಮ, ಶಾರದಾ, ಬಸವರಾಜು, ಶಕೀಲ್, ಶೋಭಾ, ನಂದಿನಿ, ಮೀನಾ, ಪ್ರೇಮಲತಾ, ಯೋಗೀಶ್ವರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment