Tuesday, March 23, 2021

ಆರ್‌ಎಸ್‌ಎಸ್ ಧುರೀಣ ವೆಂಕಟೇಶ್ ರಾಜ್ ಅರಸು ನಿಧನ

ವೆಂಕಟೇಶ್ ರಾಜ್ ಅರಸು
   ಭದ್ರಾವತಿ, ಮಾ. ೨೩: ಸಂಘ ಪರಿವಾರದ ಹಿರಿಯ ಧುರೀಣ, ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ಕಾರ್ಮಿಕ ವೆಂಕಟೇಶ್ ರಾಜ್ ಅರಸು ನಿಧನ ಹೊಂದಿದರು.
ನಗರದ ಹೊಸಮನೆ ಹನುಮಂತನಗರದಲ್ಲಿ ವಾಸವಾಗಿದ್ದ ವೆಂಕಟೇಶ್ ರಾಜ್ ಅರಸುರವರು ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಹೊಂದಿದ್ದರು.
    ಇವರು ನಾಗಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ದ ತರಬೇತಿ ಪಡೆದು ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಒಡನಾಡಿಯಾಗಿದ್ದರು. ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಶಿವಮೊಗ್ಗ, ದಾವಣಗೆರೆ ಮತ್ತು ಚಿಕ್ಕಮಗಳೂರು ೩ ಜಿಲ್ಲೆಗಳನ್ನೊಳಗೊಂಡ ಯುವಮೋರ್ಚಾದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ರೈತ ಹೋರಾಟಗಳಲ್ಲಿ ಸಹ ಮುಂಚೂಣಿಯಲ್ಲಿದ್ದರು.
    ಇವರ ನಿಧನಕ್ಕೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕ ನರಸಿಂಹಚಾರ್, ನಗರಸಭೆ ಮಾಜಿ ಉಪಾಧ್ಯಕ್ಷ ಟಿ. ವೆಂಕಟೇಶ್ ಸೇರಿದಂತೆ ಸಂಘ ಪರಿವಾರದ ಪ್ರಮುಖರು, ಬಿಜೆಪಿ ಪಕ್ಷದ ಮುಖಂಡರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

No comments:

Post a Comment