ಭದ್ರಾವತಿ, ಮಾ. ೨೬: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಹುಬ್ಬಳ್ಳಿಯ ಮೇಯರ್ ಆರ್ಗ್ಯಾನಿಕ್ ಪ್ರೈವೇಟ್ ಲಿ., ಮಹಿಳಾ ಸೇವಾ ಸಮಾಜ ಹಾಗು ತಾಲೂಕು ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಮಾ.೨೭ರಂದು ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಹಳೇನಗರದ ಮಹಿಳಾ ಸೇವಾ ಸಮಾಜದಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ ಚಿಕಿತ್ಸೆ ಹಾಗು ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಸ್ತ್ರೀ ರೋಗ ತಜ್ಞೆ ಡಾ. ವೀಣಾ ಎಸ್ ಭಟ್ ಶಿಬಿರ ಉದ್ಘಾಟಿಸಲಿದ್ದು, ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಮತ್ತು ಒಕ್ಕಲಿಗರ ಮಹಿಳಾ ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಶೋಭ ಗಂಗರಾಜ್, ಕೆ. ರಾಧ, ಜಯಂತಿ ಶೇಟ್ ಮತ್ತು ರಾಧ ಶ್ರೀಗಂಧ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.
No comments:
Post a Comment