ಭದ್ರಾವತಿ, ಮಾ. ೧೫: ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಮಾ.೧೬ರಂದು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಅಪ್ಪರ್ಹುತ್ತಾ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಗಾನ ಸೌರಭ ಯಕ್ಷಗಾನ ಶಾಲಾ ತಂಡದಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಡಾ. ಶಿವಕುಮಾರ್ ಬೇಗಾರ್ ನಿರ್ದೇಶನದ ಮೋಹಿನಿ ಭಸ್ಮಾಸುರ ಪ್ರಸಂಗ ನಡೆಯಲಿದ್ದು, ಅಲ್ಲದೆ ಸಾಧಕರಿಗೆ ಸನ್ಮಾನ, ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಲಿವೆ. ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಉತ್ತರ ಕನ್ನಡ ಅಂಕೋಲ ಜಾನಪದ ಕೋಗಿಲೆ ಪದ್ಮಶ್ರೀ ಸುಕ್ರಿ ಬೊಮ್ಮನಗೌಡ ಹಾಗು ಜಾನಪದ ಕಲಾವಿದ ತುಳಸಿಗೌಡ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ವಿಶೇಷವಾಗಿದೆ.
No comments:
Post a Comment