ಭದ್ರಾವತಿ ನ್ಯೂಟೌನ್ ದಯಾಸಾಗರ್ ಟ್ರಸ್ಟ್ನಲ್ಲಿ ನಿರ್ಗತಿಕರಿಗೆ ಲಯನ್ಸ್ ಜಿಲ್ಲಾ ಗವರ್ನರ್ ನೀಲಕಂಠ ಎಂ ಹೆಗ್ಡೆ ಊಟ ಬಡಿಸುವ ಮೂಲಕ ಸೇವಾ ಕಾರ್ಯಕ್ಕೆ ಚಾಲನೆ ನೀಡಿದರು.
ಭದ್ರಾವತಿ, ಮಾ. ೧೮: ನಗರದ ಲಯನ್ಸ್ ಕ್ಲಬ್ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದು, ಕೋವಿಡ್-೧೯ ಸಂಕಷ್ಟದ ಪರಿಸ್ಥಿತಿಯಲ್ಲೂ ಕ್ಲಬ್ ಪದಾಧಿಕಾರಿಗಳು, ಸದಸ್ಯರು ಒಗ್ಗಟ್ಟಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಲಯನ್ಸ್ ಜಿಲ್ಲಾ ಗವರ್ನರ್ ನೀಲಕಂಠ ಎಂ ಹೆಗ್ಡೆ ಪ್ರಶಂಸೆ ವ್ಯಕ್ತಪಡಿಸಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲಯನ್ಸ್ ಜಿಲ್ಲೆ ೩೧೭ಸಿ ಪ್ರದೇಶ ೯ರ ವಲಯ ೨ರ ವ್ಯಾಪ್ತಿಯಲ್ಲಿ ೫ ಸ್ಥಾನಗಳ ಪೈಕಿ ಮೊದಲ ಸ್ಥಾನ ಕಾಯ್ದುಕೊಂಡಿದೆ.
ದೇಶದಲ್ಲಿ ಒಟ್ಟು ೭೫ ಲಯನ್ಸ್ ಜಿಲ್ಲೆಗಳಿದ್ದು ೨.೮೯ ಲಕ್ಷ ಲಯನ್ಸ್ ಸದಸ್ಯರನ್ನು ಹೊಂದಿದೆ. ವಿಶ್ವದಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ದೇಶ ಭಾರತ ಎಂಬುದು ವಿಶೇಷವಾಗಿದೆ. ಕೋವಿಡ್-೧೯ರ ಹಿನ್ನಲೆಯಲ್ಲಿ ೪೭ ಲಕ್ಷ ರೂ ಮೌಲ್ಯದ ಪಿಪಿ ಕಿಟ್, ೩ ಲಕ್ಷಕ್ಕೂ ಹೆಚ್ಚು ಮಾಸ್ಕ್ ವಿತರಣೆ ಮಾಡಲಾಗಿದ್ದು, ೮೦೦ ಯೂನಿಟ್ ರಕ್ತ ಸಂಗ್ರಹಣೆ ಮಾಡಲಾಗಿದೆ ಎಂದರು. ಕುಡಿಯುವ ನೀರಿನ ಸೌಲಭ್ಯ, ವಸತಿ ಸೌಕರ್ಯ, ಸ್ವಚ್ಚತಾ ಆಂದೋಲನಾ, ವೈದ್ಯಕೀಯ ಶಿಬಿರ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಪ್ರಸ್ತುತ ೧೪೮ ಲಕ್ಷ ರು. ಮೊತ್ತದ ಜಾಗತೀಕ ಯೋಜನೆಗಳು ಜಾರಿಯಲ್ಲಿವೆ. ನಗರದ ಲಯನ್ಸ್ ಕ್ಲಬ್ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ. ಇದೀಗ ಎರಡು ನಾಮಫಲಕಗಳ ಅನಾವರಣ, ಪ್ರಥಮ ದರ್ಜೆ ಕಾಲೇಜಿನಲ್ಲಿ ಜೆರಾಕ್ಸ್ ಮತ್ತು ಪ್ರಿಂಟಿಂಗ್ ಮೆಷಿನ್ ವಿತರಣೆ, ಬಸ್ ತಂಗುದಾಣ, ನಿರ್ಗತಿಕರಿಗೆ ಊಟದ ವ್ಯವಸ್ಥೆ ಹಾಗೂ ಬಟ್ಟೆ ಹೊಲಿಯುವ ಯಂತ್ರಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ವಿ ಚಂದ್ರಶೇಖರ್, ಕಾರ್ಯದರ್ಶಿ ಆರ್. ರಾಮಮೂರ್ತಿ, ಪಿಡಿಜಿ ಬಿ. ದಿವಾಕರ ಶೆಟ್ಟಿ, ವಿಡಿಜಿ ಕೆ.ಸಿ ವೀರಭದ್ರಪ್ಪ, ಸಂಧ್ಯಾಹೆಗ್ಡೆ, ಜನಾರ್ಧನ ಅಯ್ಯಂಗಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment