ಶನಿವಾರ, ಏಪ್ರಿಲ್ 10, 2021

ರಮೇಶ್ ಶಂಕರಘಟ್ಟ ಕಾಂಗ್ರೆಸ್ ಸೇರ್ಪಡೆ ಪಕ್ಷಕ್ಕೆ ಬಲ ತಂದಿದೆ - ಶಾಸಕ ಬಿ.ಕೆ.ಸಂಗಮೇಶ್

ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶಂಕರಘಟ್ಟದ ರಮೇಶ್‌ರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ತಮ್ಮ ನಿವಾಸದಲ್ಲಿ ಅಭಿನಂದಿಸಿದರು.
     ಭದ್ರಾವತಿ, ಏ. ೧೦: ಸಹಕಾರಿ ಧುರೀಣ ಆರ್.ಎಂ ಮಂಜುನಾಥ್ ಗೌಡ ಹಾಗೂ ತಾಲ್ಲೂಕಿನ ರಮೇಶ್ ಶಂಕರಘಟ್ಟರವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಜಿಲ್ಲೆಯಲ್ಲಿ ಪಕ್ಷದ ಬಲ ಮತ್ತಷ್ಟು ಹೆಚ್ಚಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ ಹೇಳಿದರು.
    ಅವರು ಶನಿವಾರ ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶಂಕರಘಟ್ಟದ ರಮೇಶ್‌ರನ್ನು ತಮ್ಮ ನಿವಾಸದಲ್ಲಿ ಅಭಿನಂದಿಸಿ ಮಾತನಾಡಿದರು.
ರಮೇಶ್‌ರವರು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಉತ್ತಮ ಸ್ಫರ್ಧೆ ನೀಡಿದ್ದರು.  ಅಲ್ಲದೆ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ  ಉತ್ತಮ ಅಧಿಕಾರಿಯಾಗಿ ಹೆಸರು ಮಾಡಿದ್ದಾರೆ.  ಶಿಕ್ಷಣ ಹಾಗೂ ಪತ್ರಿಕಾ ಕ್ಷೇತ್ರದಲ್ಲಿನ  ಇವರ ಅನುಭವ ಪಕ್ಷ ಸಂಘಟನೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಟಿ. ಚಂದ್ರೇಗೌಡ, ಮುಖಂಡರಾದ ಸಿ.ಎಂ ಖಾದರ್, ತಾವರಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ವರಪ್ಪ, ಸಿಂಗನಮನೆ ಗ್ರಾಮ ಪಂಚಾಯತಿ ಸದಸ್ಯರಾದ ಅವಿನಾಶ್, ಶಿವಶಂಕರ್, ಮಾಜಿ ಸದಸ್ಯರಾದ ಶಶಿಕುಮಾರ್, ರುದ್ರೇಶ್, ಶ್ರೀಕಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ