ಕೋವಿಡ್-೧೯ ಮಾರ್ಗಸೂಚಿ ಪಾಲನೆ ಕಡ್ಡಾಯ
ಭದ್ರಾವತಿ, ಏ. ೨೮: ನಗರದ ವಿವಿಧೆಡೆ ಕಲ್ಯಾಣಮಂಟಪಗಳಲ್ಲಿ ಈಗಾಗಲೇ ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳಲ್ಲಿ ಕೋವಿಡ್-೧೯ ಮಾರ್ಗಸೂಚಿಗಳನ್ನು ಸರಿಯಾಗಿ ಕಟ್ಟುನಿಟ್ಟಿನಿಂದ ಪಾಲಿಸುವಂತೆ ಪೌರಾಯುಕ್ತ ಮನೋಹರ್ ನೇತೃತ್ವದ ತಂಡ ಮದುವೆ ಆಯೋಜಕರು ಹಾಗು ಕಲ್ಯಾಣ ಮಂಟಪಗಳ ಮಾಲೀಕರಿಗೆ ಸೂಚಿಸಿತು.
ನಗರದ ತರೀಕೆರೆ ರಸ್ತೆಯಲ್ಲಿರುವ ವಳ್ಳುವರ್ ಕಲ್ಯಾಣ ಮಂಟಪ, ಮಾಧವನಗರದಲ್ಲಿರುವ ದೈವಜ್ಞ ಕಲ್ಯಾಣ ಮಂಟಪ, ಸಿದ್ದಾರೂಢನಗರದ ಶ್ರೀ ಶಂಕರ ಮಠ ಸಮುದಾಯ ಭವನ ಸೇರಿದಂತೆ ವಿವಿಧ ಕಲ್ಯಾಣ ಮಂಟಪಗಳಿಗೆ ಭೇಟಿ ನೀಡಿದ ತಂಡ, ಊಟದ ಕೊಠಡಿ, ಮದುವೆ ಸ್ಥಳ, ಆಸನಗಳ ಪರಿಶೀಲನೆ, ಸಾಮಾಜಿಕ ಅಂತರ ಹಾಗು ಮದುವೆಯಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಸ್ಯಾನಿಟೈಜರ್, ಮಾಸ್ಕ್ ಬಳಕೆ ಮಾಡುವುದು ಸೇರಿದಂತೆ ಇನ್ನಿತರೆ ಪರಿಶೀಲನೆಗಳನ್ನು ನಡೆಸಲಾಯಿತು.
ಸರ್ಕಾರ ಈಗಾಗಲೇ ನಿಗದಿಪಡಿಸಿರುವ ಮದುವೆ ಕಾರ್ಯಗಳಲ್ಲಿ ಸುಮಾರು ೫೦ ಜನರು ಮಾತ್ರ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದೆ. ಅಲ್ಲದೆ ಮದುವೆ ಕಾರ್ಯಗಳಿಗೂ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ನಗರಸಭೆ ವ್ಯಾಪ್ತಿಯಲ್ಲಿ ಪೌರಾಯುಕ್ತರು ಮದುವೆ ಕಾರ್ಯಗಳಿಗೆ ಅನುಮತಿ ನೀಡುವ ಅಧಿಕಾರ ಹೊಂದಿದ್ದಾರೆ.
ಭದ್ರಾವತಿ ನಗರದ ವಿವಿಧೆಡೆ ಕಲ್ಯಾಣಮಂಟಪಗಳಲ್ಲಿ ಈಗಾಗಲೇ ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳಲ್ಲಿ ಕೋವಿಡ್-೧೯ ಮಾರ್ಗಸೂಚಿಗಳನ್ನು ಸರಿಯಾಗಿ ಕಟ್ಟುನಿಟ್ಟಿನಿಂದ ಪಾಲಿಸುವಂತೆ ಪೌರಾಯುಕ್ತ ಮನೋಹರ್ ನೇತೃತ್ವದ ತಂಡ ಮದುವೆ ಆಯೋಜಕರು ಹಾಗು ಕಲ್ಯಾಣ ಮಂಟಪಗಳ ಮಾಲೀಕರಿಗೆ ಸೂಚಿಸಿತು.
No comments:
Post a Comment