ಭದ್ರಾವತಿ, ಏ. ೧೦: ಬೈಕ್ ಸವಾರನೋರ್ವ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ಹೊಸಮನೆ ಹನುಮಂತ ನಗರ ವ್ಯಾಪ್ತಿಯಲ್ಲಿ ನಡೆದಿದೆ.
ಹೊಸಮನೆ ವಿಜಯನಗರ ನಿವಾಸಿ ಪ್ರಶಾಂತ(೪೧) ಎಂಬಾತ ಮೃತಪಟ್ಟಿದ್ದು, ಇವರು ಬೈಕ್ನಲ್ಲಿ ಬರುವಾಗ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತ ನಡೆದ ತಕ್ಷಣ ಕಾರು ಚಾಲಕ ಸ್ಥಳದಲ್ಲಿಯೇ ಕಾರು ಬಿಟ್ಟು ಪರಾರಿಯಾಗಿದ್ದು, ಕಾರು ಕೂಡ್ಲಿಗೆರೆ ವ್ಯಾಪ್ತಿಯ ಅರಳಿಹಳ್ಳಿ ಗ್ರಾಮದ ನಿವಾಸಿಯೊಬ್ಬರಿಗೆ ಸೇರಿದೆ ಎನ್ನಲಾಗಿದೆ. ಕಾರಿನ ಒಳಭಾಗದಲ್ಲಿ ಕಾರು ಮಾಲೀಕನ ಪುತ್ರ ನಿದ್ರೆಗೆ ಜಾರಿದಾಗ ಈ ಘಟನೆ ನಡೆದಿದೆ. ಆದರೆ ಅಪಘಾತ ನಡೆದಿರುವ ಘಟನೆ ಆತನ ಅರಿವಿಗೆ ಬಾರದೆ ಕಾರಿನಲ್ಲಿಯೇ ಉಳಿದುಕೊಂಡಿದ್ದು, ಸಂಚಾರಿ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ಅಪಘಾತಕ್ಕೆ ಕಾರು ಚಾಲಕನ ನಿರ್ಲಕ್ಷ್ಯತನ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
No comments:
Post a Comment