Wednesday, April 7, 2021

ಎಬಿವಿಪಿ ವತಿಯಿಂದ ವೀರ ಯೋಧರಿಗೆ ಶ್ರದ್ದಾಂಜಲಿ

ಛತ್ತಿಸ್‌ಗಡದಲ್ಲಿ ಶನಿವಾರ ನಡೆದ ನಕ್ಸಲ್ ದಾಳಿಯಲ್ಲಿ ಮೃತಪಟ್ಟ ವೀರ ಯೋಧರಿಗೆ ಭದ್ರಾವತಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶ್ರದ್ದಾಂಜಲಿ ಸಲ್ಲಿಸಲಾಯಿತು.
   ಭದ್ರಾವತಿ, ಏ. ೭: ಛತ್ತಿಸ್‌ಗಡದಲ್ಲಿ ಶನಿವಾರ ನಡೆದ ನಕ್ಸಲ್ ದಾಳಿಯಲ್ಲಿ ಮೃತಪಟ್ಟ ವೀರ ಯೋಧರಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶ್ರದ್ದಾಂಜಲಿ ಸಲ್ಲಿಸಲಾಯಿತು.
  ನಕ್ಸಲ್ ದಾಳಿಯನ್ನು ಖಂಡಿಸಿರುವ ವಿದ್ಯಾರ್ಥಿ ಪರಿಷತ್ ನಕ್ಸಲರ ಅಟ್ಟಹಾಸಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸುವ ಮೂಲಕ ಹುತಾತ್ಮರಾದ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪರಿಷತ್‌ನ ಪ್ರಮುಖರಾದ ಆಕಾಶ್, ಮನು, ಕೇಶವ, ದಿಲೀಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment