ಬಿ.ಇಡಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಬಿ.ಇಡಿ ಕಾಲೇಜಿನ ವಿದ್ಯಾರ್ಥಿಗಳು.
ಭದ್ರಾವತಿ, ಏ. ೧೬: ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಬಿ.ಇಡಿ ಕಾಲೇಜಿಗೆ ಈ ಬಾರಿ ಶೇ.೧೦೦ರಷ್ಟು ಫಲಿತಾಂಶ ಲಭಿಸಿದೆ.
ಒಟ್ಟು ೫೦ ವಿದ್ಯಾರ್ಥಿಗಳ ಪೈಕಿ ೪೨ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು ೮ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸೈಯದ ಗುಲ್ನಾಜ್ ಪರ್ವಿನ್ ಶೇ.೯೦.೬೦, ಕವಿತಾ ಎ. ಎಸ್ ಶೇ. ೮೯.೧೫ ಮತ್ತು ನಂದಿನಿ ಟಿ .ಪಿ ಶೇ. ೮೯.೦೫ರಷ್ಟು ಅತಿಹೆಚ್ಚು ಅಂಕಗಳನ್ನು ಪಡೆದು ತೇರ್ಗಡೆ ಹೊಂದಿದ್ದಾರೆ.
ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ, ಪದನಿಮಿತ್ತ ಅಧ್ಯಕ್ಷ ಎನ್. ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಡಿ. ಎಸ್. ರಾಜಪ್ಪ, ಬಿ.ಇಡಿ ವಿಭಾಗದ ಕಾರ್ಯದರ್ಶಿ ಎ .ಜೆ. ರಂಗನಾಥ್ ಪ್ರಸಾದ್ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಪ್ರಾಂಶುಪಾಲರು, ಉಪನ್ಯಾಸಕ ಹಾಗು ಸಿಬ್ಬಂದಿ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
No comments:
Post a Comment