Saturday, April 24, 2021

ನಗರಸಭೆ ಇಂಜಿನಿಯರ್ ಮೇಲೆ ಗುತ್ತಿಗೆದಾರ ಹಲ್ಲೆ

    ಭದ್ರಾವತಿ, ಏ. ೨೪: ಕಾಮಗಾರಿ ಗುಣಮಟ್ಟ ಕುರಿತು ಪ್ರಶ್ನಿಸಿದ ನಗರಸಭೆ ಇಂಜಿನಿಯರ್ ಮತ್ತು ಸಿಬ್ಬಂದಿ ಮೇಲೆ ಗುತ್ತಿಗೆದಾರನೋರ್ವ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
    ಇಂಜಿನಿಯರ್ ಎಸ್.ಆರ್ ಸತೀಶ್ ಮತ್ತು ನೀರು ಸರಬರಾಜು ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವ ದೊಡ್ಡಯ್ಯರವರ ಮೇಲೆ ಚೌಡಪ್ಪ ಎಂಬ ಗುತ್ತಿಗೆದಾರ ಬೆಂಬಲಿಗರೊಂದಿಗೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
    ನಗರಸಭೆ ೧ನೇ ವಾರ್ಡ್ ವ್ಯಾಪ್ತಿಯ ಹೆಬ್ಬಂಡಿ ಗ್ರಾಮದ ರಸ್ತೆಯೊಂದರ ಕಾಮಗಾರಿ ಗುಣಮಟ್ಟಕ್ಕೆ  ಸಂಬಂಧಿಸಿದಂತೆ ಚೌಡಪ್ಪರನ್ನು ಪ್ರಶ್ನಿಸಿದಾಗ ಈ ಘಟನೆ ನಡೆದಿದ್ದು, ಈ ಸಂಬಂಧ ನ್ಯೂಟೌನ್ ಪೊಲೀಸ್  ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪೌರಾಯುಕ್ತ ಮನೋಹರ್ ತಿಳಿಸಿದ್ದಾರೆ.

No comments:

Post a Comment