ಭದ್ರಾವತಿ, ಏ. ೨೯: ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ನಗರಸಭೆ ಜಾಗೃತಿ ಕಾರ್ಯಪಡೆ ವತಿಯಿಂದ ನಗರದ ಪ್ರಮುಖ ಸ್ಥಳಗಳಲ್ಲಿ ಗುರುವಾರ ಜಾಗೃತಿ ಮೂಡಿಸಲಾಯಿತು.
ಸಾಮಾಜಿಕ ಅಂತರ ಪಾಲಿಸಿ, ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಜರ್ ಬಳಸಿ, ಮನೆಯಲ್ಲೇ ಇರೋಣ ಕೊರೋನಾ ತೊಲಗಿಸೋಣ, ಎಲ್ಲರೂ ಕೊರೋನಾ ವಿರುದ್ಧ ಹೋರಾಟ ನಡೆಸೋಣ ಇತ್ಯಾದಿ ಫಲಕಗಳೊಂದಿಗೆ ಸಿದ್ಧರೂಢನಗರದ ಮುಖ್ಯದ್ವಾರದ ಬಳಿ, ಗ್ರಾಮ ದೇವತೆ ಶ್ರೀ ಹಳದಮ್ಮ ದೇವಸ್ಥಾನದ ಮುಂಭಾಗ ಇತ್ಯಾದಿ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
ನಗರಸಭೆ ವ್ಯವಸ್ಥಾಪಕಿ ಎಂ. ಸುನಿತಾಕುಮಾರಿ, ಲೇಖಾಧಿಕಾರಿ ಸಯ್ಯದ್ ಮೆಹಬೂಬ್ ಆಲಿ, ಕಂದಾಯಾಧಿಕಾರಿ ರಾಜ್ಕುಮಾರ್ ಸೇರಿದಂತೆ ಅಧಿಕಾರಿ ಹಾಗು ಸಿಬ್ಬಂದಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಚಿತ್ರ: ಡಿ೨೯-ಬಿಡಿವಿಟಿ೨
ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ನಗರಸಭೆ ಜಾಗೃತಿ ಕಾರ್ಯಪಡೆ ವತಿಯಿಂದ ನಗರದ ಪ್ರಮುಖ ಸ್ಥಳಗಳಲ್ಲಿ ಗುರುವಾರ ಜಾಗೃತಿ ಮೂಡಿಸಲಾಯಿತು.
No comments:
Post a Comment