Friday, April 2, 2021

ಕುರುಬರ ಸಂಘದ ಮಾಜಿ ಅಧ್ಯಕ್ಷ ಹೊನ್ನೂರಪ್ಪ ನಿಧನ

ಭದ್ರಾವತಿ, ಏ. ೨: ನಿವೃತ್ತ ಸಹಾಯಕ ತಹಸೀಲ್ದಾರ್, ತಾಲೂಕು ಕುರುಬರ ಸಂಘದ ಮಾಜಿ ಅಧ್ಯಕ್ಷ ಹೊನ್ನೂರಪ್ಪ(೭೫) ಶುಕ್ರವಾರ ನಿಧನ ಹೊಂದಿದರು.
ಓರ್ವ ಪುತ್ರಿ, ಇಬ್ಬರು ಪುತ್ರರನ್ನು ಹೊಂದಿದ್ದರು. ನಗರದ ಕನಕನಗರದ ನಿವಾಸಿಯಾಗಿರುವ ಹೊನ್ನೂರಪ್ಪ ಕುರುಬ ಸಮಾಜದ ಹಿರಿಯ ಮುಖಂಡರಾಗಿ ಗುರುತಿಸಿಕೊಳ್ಳುವ ಜೊತೆಗೆ ಸಂಘದ ಅಧ್ಯಕ್ಷರಾಗಿ ಹಾಗೂ ಚನ್ನಗಿರಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಮತ್ತು ಇನ್ನಿತರರ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸೇವೆ ಸಲ್ಲಿಸಿದ್ದರು.
ಇವರ ನಿಧನಕ್ಕೆ ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್ ಹಾಗು ಪದಾಧಿಕಾರಿಗಳು ಮತ್ತು ನಗರದ ವಿವಿಧ ಸಂಘಟನೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಇವರ ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ ಹುತ್ತಾಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ.  

ಚಿತ್ರ: ಡಿ೨-ಬಿಡಿವಿಟಿ೧
ಹೊನ್ನೂರಪ್ಪ

No comments:

Post a Comment