Thursday, April 1, 2021

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸುವವರು, ಕ್ರಿಮಿನಲ್ ಹಿನ್ನಲೆ ಹೊಂದಿರುವವರ ಬಗ್ಗೆ ಮುಂಜಾಗ್ರತೆ ವಹಿಸಿ

ತಹಸೀಲ್ದಾರ್‌ಗೆ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ಮನವಿ



ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಚುನಾವಣೆಗೆ ಸ್ಪರ್ಧಿಸುವವರ ಹಾಗು ಕ್ರಿಮಿನಲ್ ಹಿನ್ನಲೆ ಹೊಂದಿರುವವರ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಭದ್ರಾವತಿಯಲ್ಲಿ ತಹಸೀಲ್ದಾರ್‌ಗೆ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ಗುರುವಾರ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
  ಭದ್ರಾವತಿ, ಏ. ೧: ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಚುನಾವಣೆಗೆ ಸ್ಪರ್ಧಿಸುವವರ ಹಾಗು ಕ್ರಿಮಿನಲ್ ಹಿನ್ನಲೆ ಹೊಂದಿರುವವರ ಬಗ್ಗೆ ಮುಂಜಾಗ್ರತೆ ವಹಿಸುವಂತೆ ತಹಸೀಲ್ದಾರ್‌ಗೆ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ಗುರುವಾರ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
   ತಹಸೀಲ್ದಾರ್ ಗ್ರೇಡ್-೨ ರಂಗಮ್ಮರಿಗೆ ಮನವಿ ಸಲ್ಲಿಸಿದ ಶಶಿಕುಮಾರ್ ಎಸ್ ಗೌಡ, ನಗರಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಏ.೮ರಿಂದ ನಾಮಪತ್ರಗಳ ಸಲ್ಲಿಕೆ ಆರಂಭವಾಗಲಿದೆ. ಒಟ್ಟು ೩೫ ವಾರ್ಡ್‌ಗಳ ವ್ಯಾಪ್ತಿಯಲ್ಲಿ ೧೬ ವಾರ್ಡ್‌ಗಳಲ್ಲಿ ಸ್ಪರ್ಧಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸ್ಥಾನಗಳನ್ನು ಕಲ್ಪಿಸಲಾಗಿದೆ. ಆದರೆ ರಾಜಕೀಯವಾಗಿ, ಆರ್ಥಿಕವಾಗಿ ಪ್ರಬಲರಾಗಿರುವವರು ನಕಲಿ ಜಾತಿ ಪ್ರಮಾಣ ಪತ್ರ ಸೃಷ್ಟಿಸಿ ದುರುದ್ದೇಶದಿಂದ ಸ್ಥಾನಗಳನ್ನು ಕಬಳಿಸುವ ಸಾಧ್ಯತೆಗಳಿವೆ. ಅಲ್ಲದೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸಾಕಷ್ಟು ಉದಾಹರಣೆಗಳಿವೆ. ಇದರಿಂದ ಪ್ರಾಮಾಣಿಕ ಮತ್ತು ನ್ಯಾಯ ಸಮ್ಮತ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. ಈ ಕುರಿತು ಅಭ್ಯರ್ಥಿ ವಿರುದ್ಧ ಯಾರಾದರೂ ನ್ಯಾಯಾಲಯದ ಮೆಟ್ಟೆಲೇರಿದರೆ ಮಾತ್ರ ವಿಚಾರಣೆ ನಡೆಯುತ್ತದೆ. ಅಂತಿಮ ತೀರ್ಪು ಬರುವಷ್ಟರಲ್ಲಿ ೪-೫ ವರ್ಷಗಳು ಕಳೆದಿರುತ್ತವೆ. ಅಷ್ಟರಲ್ಲಿ ಚುನಾಯಿತ ಪ್ರತಿನಿಧಿಯ ೫ ವರ್ಷದ ಅವಧಿ ಮುಕ್ತಾಯಗೊಂಡಿರುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.
    ಈ ಹಿನ್ನಲೆಯಲ್ಲಿ ನಕಲಿ ಜಾತಿ ಪ್ರಮಾಣಪತ್ರ ಪಡೆಯುವವರ ಬಗ್ಗೆ ಎಚ್ಚರವಹಿಸಬೇಕು. ನಾಮಪತ್ರ ಸಲ್ಲಿಸಿದ ದಿನವೇ ಕೂಲಂಕುಷವಾಗಿ ಪರಿಶೀಲಿಸಬೇಕು. ಈ ಸಂಬಂಧ ಯಾರಾದೂರು ದೂರು ಕೊಟ್ಟಲ್ಲಿ ತಕ್ಷಣ ಅವರ ನಾಮಪತ್ರವನ್ನು ವಜಾಮಾಡಬೇಕು. ಅಲ್ಲದೆ ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

No comments:

Post a Comment