Friday, April 9, 2021

೩೫ ವಾರ್ಡ್‌ಗಳಲ್ಲೂ ಸ್ಪರ್ಧೆ : ಆಕಾಂಕ್ಷಿಗಳು ಪಕ್ಷಕ್ಕೆ ಸೇರ್ಪಡೆಗೊಳ್ಳಲು ಅವಕಾಶ

ಭದ್ರಾವತಿ ನಗರಸಭೆ ಚುನಾವಣೆಗೆ ೩೨ನೇ ವಾರ್ಡ್ ಜೆಡಿಯು ಅಭ್ಯರ್ಥಿಯಾಗಿ ಸ್ಪರ್ಧಿಸಲು ದಿವ್ಯಶ್ರೀಯವರಿಗೆ ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಬಿ ಫಾರಂ ನೀಡಲಾಯಿತು.
    ಭದ್ರಾವತಿ, ಏ. ೯: ಜನತಾದಳ(ಸಂಯುಕ್ತ) ಕರ್ನಾಟಕ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಜನಸೇವೆಯಲ್ಲಿ ತೊಡಗುವ ಅಭಿಲಾಸೆಯೊಂದಿರುವ ಆಕಾಂಕ್ಷಿಗಳಿಗೆ ಈ ಬಾರಿ ನಗರಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಲಾಗುವುದು ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ, ಶಿವಮೊಗ್ಗ ಉಸ್ತುವಾರಿ ಶಶಿಕುಮಾರ್ ಎಸ್. ಗೌಡ ಹಾಗು ಜಿಲ್ಲಾ ಸಂಚಾಲಕ ದೇವರಾಜ್ ಸಿಂಧೆ ತಿಳಿಸಿದರು.
    ಅವರು ಶುಕ್ರವಾರ ಹಳೇನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ನಗರಸಭೆ ಚುನಾವಣೆಯಲ್ಲಿ ೩೫ ವಾರ್ಡ್‌ಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ. ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲು ಪಕ್ಷದ ವರಿಷ್ಠರು ಏ.೧೩ರವರೆಗೆ ನಗರದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಈ ಹಿನ್ನಲೆಯಲ್ಲಿ ಆಕಾಂಕ್ಷಿಗಳು ನೇರವಾಗಿ ಬಂದು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಬೇಹಳ್ಳಿ ಡಿ. ನಾಗರಾಜು, ಪ್ರಧಾನ ಕಾರ್ಯದರ್ಶಿ(ಸಂಘಟನೆ) ಶಿವಮೊಗ್ಗ ಜಿಲ್ಲಾ ಉಸ್ತುವಾರಿ  ಮೊ: ೯೪೪೮೨೦೨೨೩೩ ಅಥವಾ ದೇವರಾಜ್ ಸಿಂಧೆ, ಜಿಲ್ಲಾ ಸಂಚಾಲಕರು, ಮೊ: ೯೪೮೦೨೭೭೨೯೯ ಅಥವಾ ಶಶಿಕುಮಾರ್ ಎಸ್. ಗೌಡ, ಉಪಾಧ್ಯಕ್ಷರು, ರಾಜ್ಯ ಯುವ ಘಟಕ ಮೊ: ೯೦೦೮೭೮೭೩೫೦ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದರು.
    ಪಕ್ಷದ ವತಿಯಿಂದ ಮೊದಲ ಬಾರಿಗೆ ೩೨ನೇ ವಾರ್ಡ್‌ನ ಅಧಿಕೃತ ಅಭ್ಯರ್ಥಿಯಾಗಿ ದಿವ್ಯಶ್ರೀ ಶಶಿಕುಮಾರ್ ಎಸ್. ಗೌಡ ಸ್ಪರ್ಧಿಸುತ್ತಿದ್ದು, ರಾಜ್ಯಾಧ್ಯಕ್ಷರಾದ ಮಹಿಮಾ ಜೆ ಪಟೇಲ್‌ರವರ ಸೂಚನೆಮೇರೆಗೆ ಬಿ ಫಾರಂ ನೀಡಲಾಗುತ್ತಿದೆ. ಚುನಾವಣೆಯಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಕಾಯ್ದುಕೊಳ್ಳವುದು ಪಕ್ಷದ ಬಹುದೊಡ್ಡ ಆಶಯವಾಗಿದೆ ಎಂದರು.
   ಸುದ್ದಿಗೋಷ್ಠಿಯಲ್ಲಿ ಯುವ ಘಟಕದ ರಾಜ್ಯ ಕಾರ್ಯದರ್ಶಿ ಕೆ.ಎಸ್ ಅಣ್ಣಪ್ಪ, ಮಹಿಳಾ ಘಟಕದ ತಾಲೂಕು ಸಂಚಾಲಕಿ ದಿವ್ಯಶ್ರೀ ಶಶಿಕುಮಾರ್ ಎಸ್. ಗೌಡ ಉಪಸ್ಥಿತರಿದ್ದರು.    

No comments:

Post a Comment