Sunday, April 4, 2021

ಅಧಿಕ ಪ್ರವಾಹದ ವಿದ್ಯುತ್ ತಂತಿ ತಗುಲಿ ಎತ್ತು ಸಾವು

ವಿದ್ಯುತ್ ತಂತಿ ತಗುಲಿದ ಪರಿಣಾಮ ಎತ್ತು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
    ಭದ್ರಾವತಿ, ಏ. ೪: ವಿದ್ಯುತ್ ತಂತಿ ತಗುಲಿದ ಪರಿಣಾಮ ಎತ್ತು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
   ಕಲ್ಲಹಳ್ಳಿ ಗ್ರಾಮದ ಅಂತರಘಟ್ಟಮ್ಮ ದೇವಸ್ಥಾನದ ಬಳಿ ವಿದ್ಯುತ್ ಕಂಬದ ಮೇಲೆ ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಅಧಿಕ ವಿದ್ಯುತ್ ಪ್ರವಾಹದ ತಂತಿ ಕತ್ತರಿಸಿಕೊಂಡು ರಸ್ತೆಗೆ ಬಿದ್ದಿದ್ದು, ಮಂಜಪ್ಪ ಎಂಬುವರು ತಮ್ಮ ಎತ್ತಿನ ಗಾಡಿಯಲ್ಲಿ ತೋಟಕ್ಕೆ ಹೋಗುವಾಗ ವಿದ್ಯುತ್ ತಂತಿ ಎತ್ತಿನ ಕಾಲಿಗೆ ತಲುಲಿದ ಪರಿಣಾಮ ಎತ್ತು ಸ್ಥಳದಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ. \
    ಎತ್ತಿನ ಸಾವಿಗೆ ಮೆಸ್ಕಾಂ ಇಲಾಖೆ ನಿರ್ಲಕ್ಷ್ಯತನ  ಕಾರಣ ಎಂದು ಆರೋಪಿಸಲಾಗಿದೆ. ಘಟನೆ ಕುರಿತು ಗ್ರಾಮ ಪಂಚಾಯಿತಿ ಸದಸ್ಯ ಧನಂಜಯ ಆತಂಕ ವ್ಯಕ್ತಪಡಿಸಿದ್ದಾರೆ.

No comments:

Post a Comment