Wednesday, May 12, 2021

ನೂತನ ಪೌರಾಯುಕ್ತರಾಗಿ ಪರಮೇಶ್ ಅಧಿಕಾರ ಸ್ವೀಕಾರ



ಭದ್ರಾವತಿ ನೂತನ ಪೌರಾಯುಕ್ತ ಪರಮೇಶ್ ಅವರನ್ನು ಪಕ್ಷೇತರ ಸದಸ್ಯ ಮೋಹನ್‌ಕುಮಾರ್ ಅಭಿನಂದಿಸಿದರು.
   ಭದ್ರಾವತಿ, ಮೇ. ೧೨: ಕಳೆದ ೨ ದಿನಗಳ ಹಿಂದೆ ನಗರಸಭೆ ನೂತನ ಪೌರಾಯುಕ್ತರಾಗಿ ಪರಮೇಶ್ ಅಧಿಕಾರ ವಹಿಸಿಕೊಂಡರು.
   ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮನೋಹರ್ ಅವರು ಮುಂಬಡ್ತಿ ಹೊಂದಿ ವರ್ಗಾವಣೆಗೊಂಡಿರುವ ಹಿನ್ನಲೆಯಲ್ಲಿ ಅವರ ಸ್ಥಾನಕ್ಕೆ  ಬೆಂಗಳೂರು ಗ್ರಾಮಾಂತರ ಹೊಸಕೋಟೆ ನಗರಸಭೆ ಪೌರಾಯುಕ್ತರಾಗಿ ಸೇವೆ  ಸಲ್ಲಿಸುತ್ತಿದ್ದ ಪರಮೇಶ್ ಅವರನ್ನು ನೇಮಕಗೊಳಿಸಲಾಗಿದೆ.
ಪರಮೇಶ್ ಅವರು ಕರ್ನಾಟಕ ಪೌರಾಡಳಿತ ಸೇವೆ(ಕೆಎಂಎಎಸ್) ಅಧಿಕಾರಿಯಾಗಿದ್ದು, ಪುರಸಭೆ ಮುಖ್ಯಾಧಿಕಾರಿಯಾಗಿ, ತದ ನಂತರ ಚಿಕ್ಕಮಗಳೂರು, ಕೊಪ್ಪಳ ಹಾಗು ಹೊಸಕೋಟೆ ನಗರಸಭೆ ಪೌರಾಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
          ಪೌರಾಯುಕ್ತರಿಗೆ ಅಭಿನಂದನೆ:
  ನೂತನ ಪೌರಾಯುಕ್ತ ಪರಮೇಶ್ ಅವರನ್ನು ನಗರಸಭೆ ನೂತನ ಪಕ್ಷೇತರ ಸದಸ್ಯ ಮೋಹನ್‌ಕುಮಾರ್ ಅಭಿನಂದಿಸಿದರು. ವಾರ್ಡ್ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.
ಇತ್ತೀಚೆಗೆ ೩೪ ವಾರ್ಡ್‌ಗಳಿಗೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಅತಿ ಹೆಚ್ಚು ೧೮ ಸ್ಥಾನಗಳನ್ನು, ಜೆಡಿಎಸ್ ೧೧ ಸ್ಥಾನಗಳನ್ನು ಹಾಗು ಬಿಜೆಪಿ ೪ ಸ್ಥಾನಗಳನ್ನು ಪಡೆದುಕೊಂಡಿದ್ದು, ಉಳಿದಂತೆ ಓರ್ವ ಪಕ್ಷೇತರ ಸದಸ್ಯ ಆಯ್ಕೆಯಾಗಿದ್ದಾರೆ. ಇನ್ನೂ ಜನಪ್ರತಿನಿಧಿಗಳ ಆಡಳಿತ ಅಸ್ತಿತ್ವಕ್ಕೆ ಬಂದಿಲ್ಲ.

No comments:

Post a Comment