Thursday, May 13, 2021

ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವತಿಯಿಂದ ಸ್ಯಾನಿಟೈಜರ್ ಸಿಂಪಡಣೆ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವತಿಯಿಂದ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸ್ಯಾನಿಟೈಜರ್ ಸಿಂಪಡಣೆ ಮಾಡಲಾಯಿತು.
    ಭದ್ರಾವತಿ, ಮೇ. ೧೩: ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವತಿಯಿಂದ ಸ್ಯಾನಿಟೈಜರ್ ಸಿಂಪಡಿಸಲಾಯಿತು.
    ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಲಕ್ಕಪ್ಪನ ಕ್ಯಾಂಪ್, ಅಟಗಾರಿ ಕ್ಯಾಂಪ್, ಕಲ್ಪನಹಳ್ಳಿ, ಹಳೇ ಕೂಡ್ಲಿಗೆರೆ, ಕೂಡ್ಲಿಗೆರೆ ಹಾಗು ಕೋಡಿಹಳ್ಳಿ ಒಟ್ಟು ೬ ಗ್ರಾಮಗಳಲ್ಲಿ ಸ್ಯಾನಿಟೈಜರ್ ಸಿಂಪಡಿಸಲಾಯಿತು.
    ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲಕ್ ವೀರಪ್ಪನ್, ಸದಸ್ಯರಾದ ಎಂ. ಜಯಣ್ಣ, ಆರ್.ಎನ್ ರುದ್ರೇಶ್, ಸಿ. ವಿಶ್ವನಾಥ್, ಗೌರಮ್ಮ ಮಹಾದೇವ, ಉಮಾದೇವಿ ತಿಪ್ಪೇಶ್, ಸಿದ್ದಮ್ಮ ನಾಗೇಶ್, ಮುಖಂಡರಾದ ಕೂಡ್ಲಿಗೆರೆ ಎಸ್ ಮಹಾದೇವ, ಎಸ್‌ಡಿಎಂಸಿ ಅಧ್ಯಕ್ಷ ವೀರಪ್ಪನ್, ಆಶಾ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment