ಬಿ. ಸಿದ್ದಬಸಪ್ಪ
ಭದ್ರಾವತಿ, ಮೇ. ೩೦: ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಸಹ ಶಿಕ್ಷಕ ಬಿ. ಸಿದ್ದಬಸಪ್ಪ ನೇಮಕಗೊಂಡಿದ್ದಾರೆ.
ಪ್ರಸ್ತುತ ಅಧ್ಯಕ್ಷರಾಗಿ ಎನ್. ಕೃಷ್ಣಪ್ಪ ಅವರು ಸೋಮವಾರ ನಿವೃತ್ತಿ ಹೊಂದುತ್ತಿರುವ ಹಿನ್ನಲೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರು ತಾತ್ಕಾಲಿಕವಾಗಿ ಪ್ರಭಾರ ಅಧ್ಯಕ್ಷರನ್ನಾಗಿ ಸಂಘದ ರಾಜ್ಯ ಪರಿಷತ್ ಸದಸ್ಯರಾಗಿರುವ ಬಿ. ಸಿದ್ದಬಸಪ್ಪ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬಿ. ಸಿದ್ದಬಸಪ್ಪ ಅವರು ೪ ಬಾರಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾಗಿ, ೩ ಬಾರಿ ಜಿಲ್ಲಾ ಸರ್ಕಾರಿ ನೌಕರರ ಕಾರ್ಯಕಾರಿ ಸಮಿತಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
ತಾಲೂಕು ಸರ್ಕಾರಿ ನೌಕರರ ಸಂಘ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಸಂಘ-ಸಂಸ್ಥೆಗಳು, ಶಿಕ್ಷಕರು ಸೇರಿದಂತೆ ಇನ್ನಿತರರು ನೂತನ ಅಧ್ಯಕ್ಷರನ್ನು ಅಭಿನಂದಿಸಿದ್ದಾರೆ.
No comments:
Post a Comment