ಬಿ.ಕೆ ಸಂಗಮೇಶ್ವರ್
ಭದ್ರಾವತಿ, ಮೇ. ೨೧: ಕೊರೋನಾ ಸೋಂಕು ಎಲ್ಲೆಡೆ ಹೆಚ್ಚಳವಾಗುತ್ತಿದ್ದು, ಕ್ಷೇತ್ರದ ಜನರ ಆರೋಗ್ಯದ ದೃಷ್ಟಿಯಿಂದ ೨ ದಿನ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದ್ದಾರೆ.
ಈ ಕುಡಿತು ಪತ್ರಿಕೆಯೊಂದಿಗೆ ಮಾತನಾಡಿ, ಕೊರೋನಾ ಸೋಂಕು ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಕೈಗೊಳ್ಳಲಾಗುತ್ತಿದೆ. ಪ್ರತಿಯೊಬ್ಬರು ಮನೆಯಲ್ಲಿಯೇ ಇದ್ದು ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಕುರಿತು ಜಾಗೃತಿ ಹೊಂದಬೇಕು. ಜೊತೆಗೆ ವ್ಯಾಯಾಮ, ಧ್ಯಾನ ಸೇರಿದಂತೆ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆರೋಗ್ಯ ವೃದ್ಧಿಸಿಕೊಳ್ಳಬೇಕು.
ಕ್ಷೇತ್ರದ ಪ್ರತಿಯೊಬ್ಬರ ಆರೋಗ್ಯ ಮುಖ್ಯವಾಗಿದ್ದು, ೨ ದಿನದ ಸಂಪೂರ್ಣ ಲಾಕ್ಡೌನ್ಗೆ ಸಹಕರಿಸುವ ಮೂಲಕ ಕೊರೋನಾ ತೊಲಗಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕಾರ್ಯಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ.
https://youtu.be/JPBlhvNDAwA
No comments:
Post a Comment