ಕೋವಿಡ್-೧೯ರ ಹಿನ್ನಲೆಯಲ್ಲಿ ಭದ್ರಾವತಿ ಹಳೇನಗರದ ಶ್ರೀ ರಾಮೇಶ್ವರ ಮತ್ತು ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಶಂಕರ ಜಯಂತಿ ಸರಳವಾಗಿ ಆಚರಿಸಲಾಯಿತು.
ಭದ್ರಾವತಿ, ಮೇ. ೧೮: ಕೋವಿಡ್-೧೯ರ ಹಿನ್ನಲೆಯಲ್ಲಿ ಹಳೇನಗರದ ಶ್ರೀ ರಾಮೇಶ್ವರ ಮತ್ತು ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಶಂಕರ ಜಯಂತಿ ಸರಳವಾಗಿ ಆಚರಿಸಲಾಯಿತು.
ದೇವಸ್ಥಾನದ ಆವರಣದಲ್ಲಿ ಲೋಕಾಕಲ್ಯಾಣಾರ್ಥವಾಗಿ ಶ್ರೀ ಆದಿ ಶಂಕರಚಾರ್ಯರ ಭಾವಚಿತ್ರದೊಂದಿಗೆ ಉತ್ಸವ ನಡೆಸಿ ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ವಿವಿಧ ಸಂಸ್ಥೆಗಳ ಪ್ರಮುಖರು, ಭಕ್ತರು ಪಾಲ್ತೊಂಡಿದ್ದರು.
ಹೊಸಸೇತುವೆ ರಸ್ತೆಯ ಸಿದ್ದರೂಢನಗರದಲ್ಲಿರುವ ಶ್ರೀ ಶಂಕರ ಮಠದಲ್ಲಿ ಶ್ರೀ ಆದಿ ಶಂಕರಚಾರ್ಯರ ಶಿಲಾಮೂರ್ತಿಗೆ ವಿಶೇಷ ಅಲಂಕಾರದೊಂದಿಗೆ ಪೂಜೆ ನೆರವೇರಿಸಲಾಯಿತು. ಮಠದ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment