ಮಂಗಳವಾರ, ಮೇ 18, 2021

ಕೋವಿಡ್-೧೯ : ಶಂಕರ ಜಯಂತಿ ಸರಳ ಆಚರಣೆ

ಕೋವಿಡ್-೧೯ರ ಹಿನ್ನಲೆಯಲ್ಲಿ ಭದ್ರಾವತಿ ಹಳೇನಗರದ ಶ್ರೀ ರಾಮೇಶ್ವರ ಮತ್ತು ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಶಂಕರ ಜಯಂತಿ ಸರಳವಾಗಿ ಆಚರಿಸಲಾಯಿತು.
    ಭದ್ರಾವತಿ, ಮೇ. ೧೮: ಕೋವಿಡ್-೧೯ರ ಹಿನ್ನಲೆಯಲ್ಲಿ ಹಳೇನಗರದ ಶ್ರೀ ರಾಮೇಶ್ವರ ಮತ್ತು ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಶಂಕರ ಜಯಂತಿ ಸರಳವಾಗಿ ಆಚರಿಸಲಾಯಿತು.
ದೇವಸ್ಥಾನದ ಆವರಣದಲ್ಲಿ ಲೋಕಾಕಲ್ಯಾಣಾರ್ಥವಾಗಿ ಶ್ರೀ ಆದಿ ಶಂಕರಚಾರ್ಯರ ಭಾವಚಿತ್ರದೊಂದಿಗೆ ಉತ್ಸವ ನಡೆಸಿ ಪ್ರಾರ್ಥಿಸಲಾಯಿತು. 
        ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ವಿವಿಧ ಸಂಸ್ಥೆಗಳ ಪ್ರಮುಖರು, ಭಕ್ತರು ಪಾಲ್ತೊಂಡಿದ್ದರು.
    ಹೊಸಸೇತುವೆ ರಸ್ತೆಯ ಸಿದ್ದರೂಢನಗರದಲ್ಲಿರುವ ಶ್ರೀ ಶಂಕರ ಮಠದಲ್ಲಿ ಶ್ರೀ ಆದಿ ಶಂಕರಚಾರ್ಯರ ಶಿಲಾಮೂರ್ತಿಗೆ ವಿಶೇಷ ಅಲಂಕಾರದೊಂದಿಗೆ ಪೂಜೆ ನೆರವೇರಿಸಲಾಯಿತು. ಮಠದ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ