ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಭದ್ರಾವತಿ ಸಿದ್ಧರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ಸರಳವಾಗಿ ಬಸವ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪೌರಾಯುಕ್ತ ಮನೋಹರ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಮೇ. ೧೪: ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಸಿದ್ಧರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ಸರಳವಾಗಿ ಬಸವ ಜಯಂತಿ ಆಚರಿಸಲಾಯಿತು.
ವಿಶ್ವಜ್ಞಾನಿ, ಮಹಾಮಾನವತಾವಾದಿ, ಶ್ರೀ ಜಗಜ್ಯೋತಿ ಬಸವೇಶ್ವರರ ಭಾವಚಿತ್ರ ಪುಷ್ಪನಮನ ಸಲ್ಲಿಸಿ ಜನಮೆಚ್ಚಿದ ಅಧಿಕಾರಿ ಪೌರಾಯುಕ್ತ ಮನೋಹರ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು.
ಬಸವೇಶ್ವರ ಸಭಾಭವನ ಮಾಲೀಕ ಶಿವಕುಮಾರ್, ಪ್ರಮುಖರಾದ ಮಹೇಶ್ಕುಮಾರ್, ಮಂಜುನಾಥ್, ವಾಗೀಶ್, ಜಗದೀಶ್ಪಟೇಲ್, ನಾಗರತ್ನ, ಪೂರ್ಣಿಮಾ, ಕವಿತ ಸುರೇಶ್, ಸೌಭಾಗ್ಯಮ್ಮ, ಸರೋಜಮ್ಮ, ಸೌಮ್ಯ ಮತ್ತು ಶಕುಂತಳಮ್ಮ. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Commissioner Manohar sab done very good work during his tenure. May god bless him in his future endeavour.
ReplyDeleteK M satheesh