Tuesday, May 4, 2021

ಗಾಳಿ ಮಳೆಗೆ ನೆಲಕ್ಕುರುಳಿದ ನೂರಾರು ಅಡಕೆ ಮರಗಳು : ಪರಿಹಾರಕ್ಕೆ ಆಗ್ರಹ

ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹೋಬಳಿ ಅರಬಿಳಚಿ ಗ್ರಾಮದಲ್ಲಿ ಸೋಮವಾರ ಸಂಜೆ ಸುರಿದ ಭಾರಿ ಪ್ರಮಾಣದ ಗಾಳಿ ಮಳೆಗೆ ನೂರಾರು ಅಡಕೆ ಮರಗಳು ನೆಲಕ್ಕುರುಳಿದ್ದು, ತೋಟಗಾರಿಕೆ ಇಲಾಖೆ ಅಧಿಕಾರಿ ಮಹೇಶ್, ಗ್ರಾಮ ಲೆಕ್ಕಾಧಿಕಾರಿ ಅಭಿಷೇಕ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಬಿ ಕಿರಣ್ ನೇತೃತ್ವದ ತಂಡ ಪರಿಶೀಲನೆ ನಡೆಸುತ್ತಿರುವುದು.
    ಭದ್ರಾವತಿ, ಮೇ. ೪: ತಾಲೂಕಿನ ಹೊಳೆಹೊನ್ನೂರು ಹೋಬಳಿ ಅರಬಿಳಚಿ ಗ್ರಾಮದಲ್ಲಿ ಸೋಮವಾರ ಸಂಜೆ ಸುರಿದ ಭಾರಿ ಪ್ರಮಾಣದ ಗಾಳಿ ಮಳೆಗೆ ನೂರಾರು ಅಡಕೆ ಮರಗಳು ನೆಲಕ್ಕುರುಳಿವೆ.
     ಫಸಲು ಕೊಡುವ ಅಡಕೆ ಮರಗಳು ನೆಲಕ್ಕುರುಳಿರುವ ಕಾರಣ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ನಷ್ಟವಾಗಿದೆ. ಗ್ರಾಮಕ್ಕೆ ತೋಟಗಾರಿಕೆ ಇಲಾಖೆ ಅಧಿಕಾರಿ ಮಹೇಶ್, ಗ್ರಾಮ ಲೆಕ್ಕಾಧಿಕಾರಿ ಅಭಿಷೇಕ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಬಿ ಕಿರಣ್, ಸದಸ್ಯರಾದ ಎಚ್.ಎಂ ಸದಾಶಿವಪ್ಪ, ಎಚ್.ಎಸ್ ಮಂಜುನಾಥ್, ಶಬರೀಶ್, ಗುಣಶೇಖರ್ ಸೇರಿದಂತೆ ಇನ್ನಿತರರನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ನಡುವೆ ಗ್ರಾಮದ ಯುವ ರೈತ ಮುಖಂಡ ಎಚ್.ಎಸ್ ಮಂಜುನಾಥೇಶ್ವರ ನಷ್ಟಕ್ಕೊಳಗಾಗಿರುವ ರೈತರಿಗೆ ತಕ್ಷಣ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

No comments:

Post a Comment