Thursday, May 27, 2021

ಭದ್ರಾವತಿಯಲ್ಲಿ ೧೦೭ ಸೋಂಕು ಪತ್ತೆ : ೪ ಮಂದಿ ಬಲಿ

    ಭದ್ರಾವತಿ, ಮೇ. ೨೭: ತಾಲೂಕಿನಲ್ಲಿ ಕೊರೋನಾ ಸೋಂಕು ಕಡಿಮೆಯಾಗುವ ಲಕ್ಷಣ ಕಂಡು ಬರುತ್ತಿಲ್ಲ. ಇನ್ನೂ ನೂರರ ಗಡಿಯಾಚೆಯಲ್ಲಿದ್ದು, ಗುರುವಾರ ಒಟ್ಟು ೧೦೭ ಸೋಂಕು ಪತ್ತೆಯಾಗಿದೆ.
   ಒಟ್ಟು ೪೪೮ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ಪೈಕಿ ೧೦೭ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ೧೭೬ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಈ ೪ ಮಂದಿ ಬಲಿಯಾಗಿದ್ದಾರೆ. ಇದುವರೆಗೂ ೧೦೮ ಮಂದಿ ಮೃತಪಟ್ಟಿದ್ದು, ೪೦೧ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ನಗರ ಭಾಗದಲ್ಲಿ ಒಟ್ಟು ೬೦ ಕಂಟೈನ್‌ಮೆಂಟ್ ಜೋನ್‌ಗಳಿದ್ದು, ಈ ಪೈಕಿ ೨೬ ತೆರವುಗೊಳಿಸಲಾಗಿದೆ. ಗ್ರಾಮಾಂತರ ಭಾಗದಲ್ಲಿ ಒಟ್ಟು ೨೯ ಕಂಟೈನ್‌ಮೆಂಟ್ ಜೋನ್‌ಗಳಿದ್ದು, ಈ ಪೈಕಿ ೨ ಜೋನ್ ತೆರವುಗೊಳಿಸಲಾಗಿದೆ.

No comments:

Post a Comment