Tuesday, May 25, 2021

ವಿವಿಧೆ ಬೇಡಿಕೆ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಪೋಸ್ಟರ್ ಚಳುವಳಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಲಾಕ್‌ಡೌನ್ ಹಿನ್ನಲೆಯಲ್ಲಿ ವಿಶೇಷವಾಗಿ ರಾಜ್ಯ ವ್ಯಾಪಿ ಆನ್ಲೈನ್ ಮೂಲಕ ಪೋಸ್ಟರ್ ಚಳುವಳಿ ನಡೆಸಿ ಗಮನ ಸೆಳೆದರು.
    ಭದ್ರಾವತಿ, ಮೇ. ೨೫: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಲಾಕ್‌ಡೌನ್ ಹಿನ್ನಲೆಯಲ್ಲಿ ವಿಶೇಷವಾಗಿ ರಾಜ್ಯ ವ್ಯಾಪಿ ಆನ್ಲೈನ್ ಮೂಲಕ ಪೋಸ್ಟರ್ ಚಳುವಳಿ ನಡೆಸಿ ಗಮನ ಸೆಳೆದರು.
   ಎಐಯುಟಿಯುಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಮನೆಯಿಂದ, ಕೆಲಸದ ಸ್ಥಳದಿಂದಲೇ ಪೋಸ್ಟರ್ ಚಳುವಳಿ ನಡೆಸಿದ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ವಿವಿಧ ಕೊರೋನಾ ವಾರಿಯರ್ಸ್‌ಗಳಿಗೆ ನೀಡಿರುವಂತೆ ಆಶಾ ಕಾರ್ಯಕರ್ತೆಯರಿಗೂ ಸಹ ಕೋವಿಡ್ ವಿಶೇಷ ಪ್ರೋತ್ಸಾಹ ಧನ ಮಾಸಿಕ ರು. ೫೦೦೦ ನೀಡುವಂತೆ ಆಗ್ರಹಿಸಿದರು.
    ಸೋಂಕಿಗೆ ಒಳಗಾದ ಕಾರ್ಯಕರ್ತೆಯರಿಗೆ ಸೋಂಕಿನ ತೀವ್ರತೆಗೆ ಅನುಗುಣವಾಗಿ (ಕನಿಷ್ಠ ೨೫ ಸಾವಿರ ರು.) ಪರಿಹಾರ ನೀಡುವುದು. ಅಗತ್ಯವಿರುವಷ್ಟು ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ನೀಡುವುದು. ೩ ತಿಂಗಳು ಬಾಕಿ ಇರುವ ೪,೦೦೦ ರು. ಮಾಸಿಕ ಗೌರವ ಧನ ತಕ್ಷಣ ಬಿಡುಗಡೆಗೊಳಿಸುವುದು ಹಾಗು ಮೊದಲ ಅಲೆಯಲ್ಲಿ ನಿಧನ ಹೊಂದಿರುವ ಆಶಾ ಕಾರ್ಯಕರ್ತೆಯರ ಕುಟುಂಬಗಳಿಗೆ ಕೋವಿಡ್ ವಿಮೆ ಹಣ ತಕ್ಷಣ ನೀಡುವಂತೆ ಒತ್ತಾಯಿಸಿದರು.
   ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಚಳುವಳಿ ನಡೆಸಲಾಯಿತು. ಶಾಯಿನಾ ಬಾನು, ಚಂದ್ರಕಲಾ, ಆಶಾ, ವಸಂತ ಮತ್ತು ಸುಜಾತ ನಗರದಲ್ಲಿ ಚಳುವಳಿ ನಡೆಸುವ ಮೂಲಕ ಗಮನ ಸೆಳೆದರು.

No comments:

Post a Comment