ಗುರುವಾರ, ಮೇ 13, 2021

ಹಸಿದವರ ಸಂಕಷ್ಟಕ್ಕೆ ಸ್ಪಂದಿಸಿದ ನೂತನ ನಗರಸಭಾ ಸದಸ್ಯ ಕೆ. ಸುದೀಪ್‌ಕುಮಾರ್

ಭದ್ರಾವತಿಯಲ್ಲಿ ಗುರುವಾರ ನಗರಸಭೆ ೧೨ನೇ ವಾರ್ಡ್ ನಿವಾಸಿಗಳಿಗೆ ನೂತನ ನಗರಸಭಾ ಸದಸ್ಯ ಕೆ. ಸುದೀಪ್‌ಕುಮಾರ್ ನೇತೃತ್ವದಲ್ಲಿ ಸಿದ್ದಪಡಿಸಿದ ಆಹಾರ ವಿತರಿಸಲಾಯಿತು.
     ಭದ್ರಾವತಿ, ಮೇ. ೧೩: ನೂತನ ನಗರಸಭಾ ಸದಸ್ಯ ಕೆ. ಸುದೀಪ್‌ಕುಮಾರ್ ನೇತೃತ್ವದಲ್ಲಿ ಗುರುವಾರ ನಗರಸಭೆ ವಾರ್ಡ್ ನಂ. ೧೨ರಲ್ಲಿ ಎಲ್ಲಾ ರಸ್ತೆಗಳಿಗೂ ಸ್ಯಾನಿಟೈಜರ್ ಸಿಂಪಡಿಸಲಾಯಿತು.
    ಅಲ್ಲದೆ ವಾರ್ಡ್‌ನ ಪ್ರತಿಯೊಂದು ಮನೆಗೂ ಸಿದ್ದಪಡಿಸಿದ ಆಹಾರ ವಿತರಿಸಲಾಯಿತು. ವಾರ್ಡ್ ಪ್ರಮುಖರಾದ ಗಿರೀಶ್, ನವೀನ್, ಪ್ರಕಾಶ್, ಅಶೋಕ್, ಚರಣ್, ರಘು, ಆಕಾಶ್, ಸುನಿಲ್, ಕಿಶೋರ್ ಸೇರಿದಂತೆ ಇನ್ನಿತರರು ಈ ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
   ಕಳೆದ ಬಾರಿ ಸಹ ಲಾಕ್‌ಡೌನ್ ಸಮಯದಲ್ಲೂ ಸುದೀಪ್‌ಕುಮಾರ್ ಬಡವರ ಸಂಕಷ್ಟಕ್ಕೆ ಸ್ಪಂದಿಸಿದ್ದರು. ಅಲ್ಲದೆ ಜಯಕರ್ನಾಟಕ ಜನಪರ ವೇದಿಕೆ, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ