Monday, May 10, 2021

ಕಾಂಗ್ರೆಸ್ ಮುಖಂಡ ಎಂ.ಎಸ್ ಮುರುಳಿಧರ ನಿಧನ

ಎಂ.ಎಸ್ ಮುರುಳಿಧರ
   ಭದ್ರಾವತಿ, ಮೇ. ೧೦: ನಗರದ ರಂಗಪ್ಪ ವೃತ್ತ ಸರ್ಕಲ್ ಸ್ವೀಟ್ಸ್ ಮಾಲೀಕ, ಕಾಂಗ್ರೆಸ್ ಮುಖಂಡ ಎಂ.ಎಸ್ ಮುರುಳಿಧರ(೪೫) ಅನಾರೋಗ್ಯದಿಂದ ನಿಧನ ಹೊಂದಿದರು.
   ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮುರುಳಿಧರ್ ಕೆಲವು ವರ್ಷಗಳಿಂದ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಸರ್ಕಲ್ ಸ್ವೀಟ್ಸ್ ಹೆಸರಿನಲ್ಲಿಯೇ ಗುರುತಿಸಿಕೊಂಡಿದ್ದರು. ಇವರ ನಿಧನಕ್ಕೆ ನಗರದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. 

No comments:

Post a Comment