Sunday, May 9, 2021

೨೬ ಮಂದಿಗೆ ಕೊರೋನಾ ಸೋಂಕು, ೪ ಬಲಿ

ಭದ್ರಾವತಿ, ಮೇ. ೯: ಕೊರೋನಾ ಸೋಂಕು ೨ನೇ ಅಲೆ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ತಾಲೂಕಿನಲ್ಲಿ ಭಾನುವಾರ ಒಟ್ಟು ೨೬ ಮಂದಿಗೆ ಸೋಂಕು ದೃಢಪಟ್ಟಿದೆ.
     ಒಟ್ಟು ೬೮ ಮಂದಿಯ ಗಂಟಲು ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ ೨೬ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ೪೨ ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಭಾನುವಾರ ಒಂದೇ ದಿನ ೪ ಮಂದಿ ಸೋಂಕಿಗೆ ಬಲಿಯಾಗಿದ್ದು, ಇದುವರೆಗೂ ೪೪ ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಒಟ್ಟು ೫೦ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ೨೫ ಕಂಟೈನ್‌ಮೆಂಟ್ ಜೋನ್‌ಗಳಿದ್ದು, ೨ ಜೋನ್‌ಗಳನ್ನು ತೆರವುಗೊಳಿಸಲಾಗಿದೆ.
         ಮೇ.೧೦ರಂದು ಕೋವಿಡ್ ಆಸ್ಪತ್ರೆ ಉದ್ಘಾಟನೆ:
   ೧೦೦ ಹಾಸಿಗೆಯುಳ್ಳ ಹಳೇನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯನ್ನು ಕೋವಿಡ್-೧೯ ಆಸ್ಪತ್ರೆಯನ್ನಾಗಿ ರೂಪಿಸಲಾಗಿದ್ದು, ಮೇ.೧೦ರಂದು ಬೆಳಿಗ್ಗೆ ೧೨ ಗಂಟೆಗೆ ಉದ್ಘಾಟನೆ ನಡೆಯಲಿದೆ.
ಈಗಾಗಲೇ ಕೊರೋನಾ ಸೋಂಕಿನ ಲಕ್ಷಣವಿರುವವರಿಗೆ ನಿಗಾ ವಹಿಸಲು ಹಾಗು ಸೋಂಕಿಗೆ ಒಳಗಾದವರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

No comments:

Post a Comment