ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಕುಟುಂಬ ವರ್ಗದವರು ಗೋ ಶಾಲೆಗಳಿಗೆ ಉಚಿತ ಮೇವು ಒದಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಭದ್ರಾವತಿ, ಮೇ. ೧೭: ಕೊರೋನಾ ಸಂಕಷ್ಟಕ್ಕೆ ಒಳಗಾಗಿರುವುದು ಕೇವಲ ಮನುಷ್ಯರು ಮಾತ್ರವಲ್ಲ ಪ್ರಾಣಿ, ಪಕ್ಷಿಗಳು ಸಹ ಸಂಕಷ್ಟಕ್ಕೆ ಒಳಗಾಗಿವೆ. ಅವುಗಳ ನೆರವಿಗೂ ಮುಂದಾಗಬೇಕೆಂಬ ಮನೋಭಾವನೆಯೊಂದಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಗೋ ಶಾಲೆಗಳಿಗೆ ಉಚಿತ ಮೇವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಶಾಸಕರ ಸಹೋದರ, ನಗರಸಭಾ ಸದಸ್ಯ ಬಿ.ಕೆ ಮೋಹನ್ ಸೇರಿದಂತೆ ಇಡೀ ಕುಟುಂಬ ಮೇವು ಒದಗಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಶಿವಮೊಗ್ಗ ಮಂಡೆಕೊಪ್ಪದಲ್ಲಿರುವ ಭಾನುಪ್ರಕಾಶ್ರವರ ಸುರಬಿ ಗೋ ಶಾಲೆಗೆ ೫ನೇ ಬಾರಿಗೆ ಮೇವು ಒದಗಿಸಲಾಗಿದೆ.
ಕಳೆದ ಬಾರಿ ಲಾಕ್ಡೌನ್ ಸಂದರ್ಭದಲ್ಲೂ ಸಹ ಜಾನುವಾರುಗಳಿಗೆ ಅಗತ್ಯವಿರುವ ಮೇವು ಸಂಗ್ರಹಿಸಿ ಗೋ ಶಾಲೆಗಳಿಗೆ ವಿತರಿಸಲಾಗಿತ್ತು.
No comments:
Post a Comment