ರಾಮಕೃಷ್ಣೇಗೌಡ(ಕ್ಯಾಂಟಿನ್ ಗೌಡ)
ಭದ್ರಾವತಿ, ಮೇ. ೧೫: ನಗರಸಭೆ ಮಾಜಿ ಸದಸ್ಯ, ಕಂಚಿನಬಾಗಿಲು ಸಮೀಪದ ಹನುಮಂತನಗರದ ನಿವಾಸಿ ರಾಮಕೃಷ್ಣೇಗೌಡ(೬೯) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.
ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಕ್ಕಳನ್ನು ಹೊಂದಿದ್ದರು. ರಾಮಕೃಷ್ಣೇಗೌಡರವರು ಕ್ಯಾಂಟಿನ್ ಗೌಡ ಎಂದು ಚಿರಪರಿಚಿತರಾಗಿದ್ದರು. ಈ ಹಿಂದೆ ಸಮಾಜವಾದಿ ಜನತಾ ಪಕ್ಷದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಂತರ ಜೆಡಿಎಸ್ ಹಾಗು ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದರು.
ಸಮಾಜ ಸೇವೆ:
ರಾಮಕೃಷ್ಣಗೌಡರವರು ಕೇವಲ ರಾಜಕೀಯಕ್ಕೆ ಮಾತ್ರ ಸೀಮಿತವಾಗಿರದೆ ಹಲವು ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ದೀನದಲಿತರು, ನಿರ್ಗತಿಕರು, ಅಸಹಾಯಕರು, ವಿಕಲಚೇತನರು ಸೇರಿದಂತೆ ಬಡ ವರ್ಗದವರಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಉಚಿತವಾಗಿ ನೆರವು ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ಸಂತಾಪ:
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಮಕೃಷ್ಣೇಗೌಡರವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ ಹಾಗು ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
He ವಾಸ್ ಹೆಲಪಿಂಗ್ ಪೂರ್ & ನೀಡಿ persons
ReplyDeletealways:Let the Nobel Soul rest ಇನ್ Peace.
K M Satheesh