Tuesday, May 25, 2021

ರಂಗಪ್ಪ ನಿಧನ

ರಂಗಪ್ಪ  
   ಭದ್ರಾವತಿ, ಮೇ. ೨೫: ತಾಲೂಕಿನ ಬಾರಂದೂರು ಗ್ರಾಮದ ನಿವಾಸಿ ರಂಗಪ್ಪ(೭೦) ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದರು.
  ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಹೊಂದಿದ್ದರು. ಮಾದಿಗ ಸಮಾಜ, ಆದಿ ಜಾಂಬವ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ ಹಿರಿಯ ಮಾರ್ಗದರ್ಶಕರಾಗಿ ಬಾರಂದೂರು ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತಿದ್ದರು.
  ಇವರ ನಿಧನಕ್ಕೆ ಬಾರಂದೂರು ಗ್ರಾಮಸ್ಥರು, ಕರ್ನಾಟಕ ರಾಜ್ಯ ಮಾದಿಗ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

No comments:

Post a Comment