ಭದ್ರಾವತಿ, ಮೇ. ೨೦: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಪುನಃ ಏರಿಕೆಯಾಗಿದ್ದು, ಗುರುವಾರ ೨೦೪ ಸೋಂಕು ದೃಢಪಟ್ಟಿದೆ.
ಒಟ್ಟು ೩೭೯ ಮಂದಿ ಮಾದರಿ ಸಂಗ್ರಹಿಸಲಾಗಿದ್ದು, ಪೈಕಿ ೨೦೪ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ೧೨೩ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಇದುವರೆಗೂ ಒಟ್ಟು ೮೧ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು ೩೯೫ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಲಾಕ್ಡೌನ್ ಅವಧಿ ಮುಕ್ತಾಯಗೊಳ್ಳಲು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಹಂತದಲ್ಲೂ ಸೋಂಕು ನಿಯಂತ್ರಣಕ್ಕೆ ಬರದಿರುವುದು ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಲಾಕ್ಡೌನ್ ಬಿಗಿಗೊಳಿಸಲು ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.
No comments:
Post a Comment