Sunday, June 6, 2021

ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಎಂ.ಜಿ ರಾಮಚಂದ್ರ ನೇಮಕ


ಎಂ.ಜಿ ರಾಮಚಂದ್ರ
   ಭದ್ರಾವತಿ, ಜೂ. ೬: ನಗರಸಭೆ ವಾರ್ಡ್ ನಂ.೨೭ರ ವ್ಯಾಪ್ತಿಯ ಆಂಜನೇಯ ಅಗ್ರಹಾರ ೭ನೇ ರಸ್ತೆ ನಿವಾಸಿ ಎಂ.ಜಿ ರಾಮಚಂದ್ರ ಅವರನ್ನು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.
    ಪಕ್ಷದ ಜಿಲ್ಲಾಧ್ಯಕ್ಷ ಎಚ್.ಎಸ್ ಸುಂದರೇಶ್ ಅವರ ಸೂಚನೆ ಮೇರೆಗೆ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ ನೇಮಕಗೊಳಿಸಿ ಆದೇಶ ಹೊರಡಿಸಿದ್ದು, ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದ್ದಾರೆ.
    ಕಾಂಗ್ರೆಸ್ ಐ.ಟಿ ಸೆಲ್ ವಿಭಾಗದ ತಾಲೂಕು ಅಧ್ಯಕ್ಷ ವಿಲ್ಸನ್‌ಬಾಬು, ೨೬ನೇ ವಾರ್ಡ್ ನಗರಸಭಾ ಸದಸ್ಯೆ ಸರ್ವಮಂಗಳ ಭೈರಪ್ಪ, ಮಾಜಿ ನಗರಸಭಾ ಸದಸ್ಯರಾದ ಮುಕುಂದಪ್ಪ, ಪ್ರಾನ್ಸಿಸ್ ಸೇರಿದಂತೆ ಇನ್ನಿತರರು ರಾಮಚಂದ್ರ ಅವರನ್ನು ಅಭಿನಂದಿಸಿದ್ದಾರೆ.
    ಉಪಾಧ್ಯಕ್ಷರನ್ನಾಗಿ ನೇಮಕಗೊಳ್ಳಲು ಕಾರಣಕರ್ತರಾದ ಶಾಸಕ ಬಿ.ಕೆ ಸಂಗಮೇಶ್ವರ್, ಜಿಲ್ಲಾಧ್ಯಕ್ಷ ಎಚ್.ಎಸ್ ಸುಂದರೇಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ. ಚಂದ್ರೇಗೌಡ ಅವರಿಗೆ ರಾಮಚಂದ್ರ ಕೃತಜ್ಞತೆ ಸಲ್ಲಿಸಿದ್ದಾರೆ.

No comments:

Post a Comment