Wednesday, June 9, 2021

ಅಕ್ರಮ ಮನೆ ನಿರ್ಮಾಣ : ಸಕ್ರಮಕ್ಕೆ ಅರ್ಜಿ ಸಲ್ಲಿಸಿ

      ಭದ್ರಾವತಿ, ಜೂ. ೯: ತಾಲೂಕಿನ ನಗರ ಪ್ರದೇಶದಲ್ಲಿ ೯೪ ಸಿಸಿ ಹಾಗು ಗ್ರಾಮೀಣ ಪ್ರದೇಶದಲ್ಲಿ ೯೪ ಸಿ ಯೋಜನೆಯಡಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡಿರುವವರು ಸಕ್ರಮ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಕ್ಷೇತ್ರದ ನಾಗರೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದ್ದಾರೆ.
    ತಾಲೂಕು ಆಡಳಿತ ತಕ್ಷಣ ಸರ್ಕಾರ ಕೈಗೊಂಡಿರುವ ಈ ಯೋಜನೆಯನ್ನು ವ್ಯಾಪಕವಾಗಿ ಪ್ರಚಾರ ನಡೆಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕು. ನಾಗರೀಕರು ೯೪ ಸಿಸಿ ಹಾಗು ೯೪ ಸಿ ಯೋಜನೆಯಡಿ ಸಕ್ರಮ ಮಾಡಿಕೊಳ್ಳಲು ಅಗತ್ಯವಿರುವ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಂಡು ತಕ್ಷಣ ಅರ್ಜಿ ಸಲ್ಲಿಸಬೇಕೆಂದು ಕೋರಿದ್ದಾರೆ.  

No comments:

Post a Comment