Wednesday, June 2, 2021

ಶಾಸಕರ ಅನುದಾನದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ೨ ಅಂಬ್ಯುಲೆನ್ಸ್ ಖರೀದಿ

ಎರಡರ ಪೈಕಿ ಒಂದು ಅಂಬ್ಯುಲೆನ್ಸ್ ಸೇವೆಗೆ ಸಮರ್ಪಿಸಿದ ಶಾಸಕ ಬಿ.ಕೆ ಸಂಗಮೇಶ್ವರ್


ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ತುರ್ತು ಸೇವೆಗಾಗಿ ೨ ಹೊಸ ಅಂಬ್ಯುಲೆನ್ಸ್‌ಗಳನ್ನು ಶಾಸಕರ ನಿಧಿಯಿಂದ ಖರೀದಿಸಲಾಗಿದ್ದು, ಈ ಪೈಕಿ ಒಂದು ಅಂಬ್ಯುಲೆನ್ಸ್ ಬುಧವಾರ ಶಾಸಕ ಬಿ.ಕೆ ಸಂಗಮೇಶ್ವರ್ ಸೇವೆಗೆ ಸಮರ್ಪಿಸಿದರು.
    ಭದ್ರಾವತಿ, ಜೂ. ೨: ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ತುರ್ತು ಸೇವೆಗಾಗಿ ೨ ಹೊಸ ಅಂಬ್ಯುಲೆನ್ಸ್‌ಗಳನ್ನು ಶಾಸಕರ ನಿಧಿಯಿಂದ ಖರೀದಿಸಲಾಗಿದ್ದು, ಈ ಪೈಕಿ ಒಂದು ಅಂಬ್ಯುಲೆನ್ಸ್ ಬುಧವಾರ ಶಾಸಕ ಬಿ.ಕೆ ಸಂಗಮೇಶ್ವರ್ ಸೇವೆಗೆ ಸಮರ್ಪಿಸಿದರು.
    ಶಾಸಕರ ೧ ಕೋ. ರು. ಅನುದಾನದಲ್ಲಿ ಈಗಾಗಲೇ ೧೦೦ ಹಾಸಿಗೆಯುಳ್ಳ ಕೋವಿಡ್ ಸೋಂಕಿತರ ಆರೋಗ್ಯ ಕೇಂದ್ರ ನಿರ್ಮಾಣ, ಈ ಪೈಕಿ ೨೪ ಲಕ್ಷ ರು. ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ೨ ಅಂಬ್ಯುಲೆನ್ಸ್‌ಗಳನ್ನು ಖರೀದಿಸಲಾಗಿದೆ.
  ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ತಾಲ್ಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ, ನಗರಸಭೆ ಸದಸ್ಯ ಕೆ. ಸುದೀಪ್‌ಕುಮಾರ್, ಕಂದಾಯಾಧಿಕಾರಿ ಪ್ರಶಾಂತ್, ಉದ್ಯಮಿ ಎ. ಮಾದು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment